23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಉಪವ್ಯವಸ್ಥಾಪಕ ಸತೀಶ್ ರಾವ್, ಕೆ.ಎಮ್.ಎಫ್ ಸಹಾಯಕ ವ್ಯವಸ್ಥಾಪಕ, ಪಶು ವೈದ್ಯಾಧಿಕಾರಿ ಡಾ| ಗಣಪತಿ, ಕೆ.ಎಂ.ಎಫ್ ಕೃಷಿ ಅಧಿಕಾರಿ ಡಾ. ನಿರಂಜನ್, ಕೆ.ಎಮ್.ಎಫ್ ವಿಸ್ತರಣಾಧಿಕಾರಿಯಾದ ಯಮುನ, ಸುಚಿತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಸಿರು ಮೇವಿನ ತಳಿಗಳ ಬಗ್ಗೆ ಹಾಗೂ ಸೈಲೇಜ್ / ರಸ ಮೇವು ಉಪಯೋಗದ ಬಗ್ಗೆ ಮಾಹಿತಿ., ಜಾನುವಾರುಗಳ ಗರ್ಭಧಾರಣೆ ಸಮಸ್ಯೆಯ ಬಗ್ಗೆ, ಜಾನುವಾರುಗಳ ವಿಮೆ (ಇನ್ಶೂರೆನ್ಸ್) ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಘದ ವತಿಯಿಂದ ಹಾಲು ಹಾಕುವ ಸದಸ್ಯರ ಒಂದು ದನಕ್ಕೆ ಉಚಿತವಾಗಿ ವಿಮೆಯನ್ನು ಮಾಡಲಾಯಿತು.

ಸಂಘದಲ್ಲಿ 200ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಯತೀಶ್ ಗೌಡ ಕಂಗಿತ್ತೀಲು ಸ್ವಾಗತಿಸಿ, ಅಜಿತ್ ಕುಮಾರ್ ಅರಿಗ ಪ್ರಸ್ತಾವಿಕ ಮಾತನಾಡಿದರು., ಜಯಂತ್ ಗೌಡ ಧನ್ಯವಾದವಿತ್ತರು.

Related posts

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಶೃಂಗೇರಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya
error: Content is protected !!