September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

ನಡ: ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರವು ಅ.5ರಂದು ನಡ ಸಮಾಜ ಮಂದಿರದಲ್ಲಿ ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಡ ಹಾ.ಉ.ಸ. ಸಂಘದ ಅಧ್ಯಕ್ಷ ಜರ್ನಾದನ ಗೌಡ ವಹಿಸಿದರು.

ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಉಪವ್ಯವಸ್ಥಾಪಕ ಸತೀಶ್ ರಾವ್, ಕೆ.ಎಮ್.ಎಫ್ ಸಹಾಯಕ ವ್ಯವಸ್ಥಾಪಕ, ಪಶು ವೈದ್ಯಾಧಿಕಾರಿ ಡಾ| ಗಣಪತಿ, ಕೆ.ಎಂ.ಎಫ್ ಕೃಷಿ ಅಧಿಕಾರಿ ಡಾ. ನಿರಂಜನ್, ಕೆ.ಎಮ್.ಎಫ್ ವಿಸ್ತರಣಾಧಿಕಾರಿಯಾದ ಯಮುನ, ಸುಚಿತ್ರಾ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರದೇಶಕ್ಕೆ ಹೊಂದಿಕೊಳ್ಳುವ ಹಸಿರು ಮೇವಿನ ತಳಿಗಳ ಬಗ್ಗೆ ಹಾಗೂ ಸೈಲೇಜ್ / ರಸ ಮೇವು ಉಪಯೋಗದ ಬಗ್ಗೆ ಮಾಹಿತಿ., ಜಾನುವಾರುಗಳ ಗರ್ಭಧಾರಣೆ ಸಮಸ್ಯೆಯ ಬಗ್ಗೆ, ಜಾನುವಾರುಗಳ ವಿಮೆ (ಇನ್ಶೂರೆನ್ಸ್) ಯೋಜನೆಯ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಸಂಘದ ವತಿಯಿಂದ ಹಾಲು ಹಾಕುವ ಸದಸ್ಯರ ಒಂದು ದನಕ್ಕೆ ಉಚಿತವಾಗಿ ವಿಮೆಯನ್ನು ಮಾಡಲಾಯಿತು.

ಸಂಘದಲ್ಲಿ 200ಕ್ಕೂ ಅಧಿಕ ರೈತರು ಭಾಗವಹಿಸಿದ್ದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.

ಯತೀಶ್ ಗೌಡ ಕಂಗಿತ್ತೀಲು ಸ್ವಾಗತಿಸಿ, ಅಜಿತ್ ಕುಮಾರ್ ಅರಿಗ ಪ್ರಸ್ತಾವಿಕ ಮಾತನಾಡಿದರು., ಜಯಂತ್ ಗೌಡ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಗುರುವಾಯನಕೆರೆ: ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!