ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

ಮಡಂತ್ಯಾರು : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಪ್ರಯುಕ್ತ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಸಹಯೋಗದಲ್ಲಿ 50ನೇ ವರ್ಷದ ನಿಮಿತ್ತ ಶ್ರೀ ಮಹಾಭಾರತ ಸರಣಿಯಲ್ಲಿ 49ನೇ ಕಾರ್ಯಕ್ರಮವಾಗಿ ಭೀಮ -ದ್ರೌಪದಿ ಸಮರ ಸನ್ನಾಹ, ತಾಳಮದ್ದಳೆ ಜರಗಿತು.


ಭಾಗವತರಾಗಿ ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಹರೀಶ ಆಚಾರ್ಯ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಶ್ರೀಪತಿ ಭಟ್ಉಪ್ಪಿನಂಗಡಿ , ಜಗದೀಶ ಚಾರ್ಮಾಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ, ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ದ್ರೌಪದಿ ), ದಿವಾಕರ ಆಚಾರ್ಯ ಗೇರುಕಟ್ಟೆ, ಹರೀಶ ಆಚಾರ್ಯ ಬಾರ್ಯ(ಶ್ರೀ ಕೃಷ್ಣ ), ಜಯರಾಮ ಬಲ್ಯ(ಭೀಮ ), ಸಂಜೀವ ಪಾರೆಂಕಿ(ಧರ್ಮರಾಯ), ಶ್ರೀಮತಿ ಶ್ರುತಿ ವಿಸ್ಮಿತ್ ಬಲ್ನಾಡು(ಸಹದೇವ,ಅರ್ಜುನ )ರಾಗಿ ಭಾಗವಹಿಸಿದ್ದರು.

ಕಳಿಯ ಸಿ.ಎ. ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಅಸ್ರನ್ನ, ಕಚೇರಿ ವ್ಯವಸ್ಥಾಪಕ ಗಿರೀಶ್ ಶೆಟ್ಟಿ, ವಿಠ್ಠಲಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು.


ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ. ಎಚ್.ಗೇರುಕಟ್ಟೆ ಸ್ವಾಗತಿಸಿ,ದೇವಳ ಅಭಿವೃದ್ಧಿ ಸಮಿತಿ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ ವಂದಿಸಿದರು.

Related posts

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಬೆಳ್ತಂಗಡಿ ಮಾತೃಶ್ರೀ ಟೆಕ್ಸ್ ಟೈಲ್ಸ್ ನಲ್ಲಿ ಆಷಾಡ (ಆಟಿ) ಮೆಗಾ ಡಿಸ್ಕೌಂಟ್ ಸೇಲ್: ಹೊಚ್ಚ ಹೊಸ ಸಂಗ್ರಹದೊಂದಿಗೆ 10% ರಿಂದ 50% ಪ್ರತಿ ಖರೀದಿಯ ಮೇಲೆ ಡಿಸ್ಕೌಂಟ್

Suddi Udaya

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya
error: Content is protected !!