September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

ಮುಂಡಾಜೆ : “ಉತ್ತಮ ಓದುಗನಾದರೆ ಜ್ಞಾನವನ್ನು ವೃದ್ಧಿ ಮಾಡಿಕೊಳ್ಳುವುದರ ಜೊತೆಗೆ ಪ್ರಪಂಚದ ಆಗುಹೋಗುಗಳನ್ನು ತಿಳಿಯಬಹುದು. ಪತ್ರಿಕಾ ಕ್ಷೇತ್ರದಲ್ಲಿ ಮೈಮರೆಯದೆ ಜಾಗೃತರಾಗಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ಪ್ರಜಾವಾಣಿಯ ಉಪಸಂಪಾದಕ ರೇವಣ್ಣ ಎಂ ಅಭಿಪ್ರಾಯಪಟ್ಟರು.

ಅವರು ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದಲ್ಲಿ ‘ಮಾಧ್ಯಮ ಕ್ಷೇತ್ರದ ಅವಕಾಶಗಳು ಮತ್ತು ಸವಾಲುಗಳು’ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸಂಜೀವ ಗೌಡ ಮಾಕಳರು, ವಹಿಸಿದ್ದರು. ಅತಿಥಿಗಳಾಗಿ ಜತ್ತನ್ನ ಗೌಡ, ನಿವೃತ ಬಿ.ಎಸ್.ಎನ್.ಎಲ್, ಉದ್ಯೋಗಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಿಬಿರ ನಿರ್ವಹಣಾ ಸಮಿತಿಯ ಅಧ್ಯಕ್ಷ ಸೋಮನಾಥ ಗೌಡ ಮಾಕಳ ಉಪಸ್ಥಿತರಿದ್ದರು. ಶಿಬಿರಾರ್ಥಿ ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಬಿರಾಧಿಕಾರಿ ಶ್ರೀಮತಿ ನಮಿತಾ ಕೆ.ಆರ್ ಸ್ವಾಗತಿಸಿ, ಅಕ್ಷಯ ಧನ್ಯಾವಾದಗೈದರು.

Related posts

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya

ಉಜಿರೆ:ಎಸ್‌.ಡಿ.ಎಂ ಅಂತರಾಷ್ಟ್ರೀಯ ಯೋಗ ಮತ್ತು ನ್ಯಾಚುರೋಪತಿ ಸಮ್ಮೇಳನದ ಸಮಾರೋಪ

Suddi Udaya
error: Content is protected !!