ವೇಣೂರು : ದೇವಾಡಿಗರ ಸೇವಾ ವೇದಿಕೆ ವೇಣೂರು ಇದರ ವತಿಯಿಂದ ಪ್ರತಿ ವರ್ಷದಂತೆ ಶರನ್ನವರಾತ್ರಿ ಪ್ರಯುಕ್ತ ದೇವಾಡಿಗ ಸಮುದಾಯ ಭವನದಲ್ಲಿ ಶ್ರೀ ಶಾರದಾ ಪೂಜೆಯು ಅ.6 ರಂದು ನಡೆಯಿತು.
ಪೂಜಾ ಕಾರ್ಯಕ್ರಮದಲ್ಲಿ ದೇವಾಡಿಗ ಸೇವಾ ವೇದಿಕೆ ವೇಣೂರು ವಲಯದ ಹಿರಿಯರಾದ ಶೀನದೇವಾಡಿಗ, ವೇದಿಕೆಯ ಗೌರವಾಧ್ಯಕ್ಷ ಸುಂದರ ಎಂ ದೇವಾಡಿಗ, ಕಾರ್ಯದರ್ಶಿ ಗಣೇಶ ದೇವಾಡಿಗ, ವೇದಿಕೆಯ ಉಪಾಧ್ಯಕ್ಷ ದಯಾನಂದ ದೇವಾಡಿಗ, ದೇವಾಡಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಸುಮತಿ ಪಿ.ಎನ್, ಕೋಶಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಈ ವೇಳೆ ದೇವಾಡಿಗ ಸಮಾಜ ಬಾಂಧವರು ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾದರು. ಭಜನಾ ಕಾರ್ಯಕ್ರಮ ನಡೆದು ಪ್ರಸಾದ ವಿತರಣೆ ನಡೆಯಿತು.