24.1 C
ಪುತ್ತೂರು, ಬೆಳ್ತಂಗಡಿ
May 21, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

ಕೊಯ್ಯೂರು : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಅ.5 ರಂದು ವರದಿಯಾಗಿದೆ.

ಸೆ.29 ರಂದು ಮಲೆಬೆಟ್ಟು ಕೋಡಿಮಾರು ನಿವಾಸಿ ಅಮೃತೇಶ್‌ ಕುಮಾರ್‌ ಎ ರವರು ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ಅವರ ಬಾಬ್ತು ಮೊಬೈಲ್‌ ನಲ್ಲಿದ್ದ ಟೆಲಿಗ್ರಾಂ ಅಪ್ಲಿಕೇಶನ್‌ ಗೆ ಯಾರೋ ಅಪಚಿರಿತರು https://ecommerecboostbranding.Com ವೆಬ್‌ ಸೈಟ್‌ ನ ಲಿಂಕ್‌ ನ್ನು ಕಳುಹಿಸಿ ನೊಂದಾಯಿಸಿಕೊಂಡು ಆನ್‌ ಲೈನ್‌ ವಸ್ತುಗಳನ್ನು ಉತ್ತೇಜಿಸಿದಲ್ಲಿ ಸಂಬಳದ ರೂಪದಲ್ಲಿ ಖಾತೆಗೆ ಹಣ ಜಮಾ ಮಾಡಲಾಗುವುದೆಂದು ತಿಳಿಸಿದಂತೆ, ಅಮೃತೇಶ್‌ ಕುಮಾರ್‌ ರವರು ವಂಚಕರ ಮಾರ್ಗದರ್ಶನದಂತೆ ಸದ್ರಿ ಲಿಂಕ್‌ ನ್ನು ಓಪನ್‌ ಮಾಡಿ ನೊಂದಾಯಿಸಿ ಕೊಂಡು ಅವರು ನೀಡಿರುವ ಟಾಸ್ಕನ್ನು ಮುಂದುವರಿಸುತ್ತಾ ಹೋದಂತೆ, ಟಾಸ್ಕನ್ನು ಮುಕ್ತಾಯಗೊಳಿಸಲು ಠೇವಣಿ ರೂಪದಲ್ಲಿ ಹಣ ಸಂದಾಯ ಮಾಡಬೇಕಾಗಿ ಮತ್ತು ವಿಶೇಷ ಬೋನಸ್‌ ಲಭಿಸಿದಲ್ಲಿ ದೊರೆಯುವ ಬೋನಸ್‌ ಪಡೆಯಲು ಠೇವಣಿ ಹಣವನ್ನು ಮತ್ತೆ ಮತ್ತೆ ಪಾವತಿಸಲು ತಿಳಿಸಿದಂತೆ ಅಮೃತೇಶ್‌ ಕುಮಾರ್‌ ಅವರ ವಿವಿಧ ಬ್ಯಾಂಕ್‌ ಖಾತೆಯಿಂದ ಅಪರಿಚಿತ ವ್ಯಕ್ತಿಯ ವಿವಿಧ ಬ್ಯಾಂಕ್‌ ಖಾತೆಗೆ ಒಟ್ಟು 19,90,442/- ರೂ ಹಣವನ್ನು ಹಂತ-ಹಂತವಾಗಿ ವರ್ಗಾಯಿಸಿದ್ದು, ಜಮಾ ಮಾಡಿದ ಹಣವನ್ನು ವಾಪಾಸ್ಸು ನೀಡದೇ ನಂಬಿಸಿ ಮೋಸ ಮಾಡಿ ವಂಚಿಸಿದ್ದು ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನಂತೆ ಅಪರಿಚಿತರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 85/2024 ಕಲಂ: 318(2) 318(4) BNS – 2023 & 66(D) IT ACT 2008 ದೂರು ದಾಖಲಾಗಿ ತನಿಖೆಯಲ್ಲಿರುತ್ತದೆ.

Related posts

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya

ಉರುವಾಲು ಶ್ರೀ ಭಾರತೀ ಆ.ಮಾ. ಪ್ರೌಢ ಶಾಲೆ ಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಸಯ್ಯದ್ ಫಝಲ್ ಅಲ್ ಬುಖಾರಿ ಕೂರತ್ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya
error: Content is protected !!