September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

ಕೊಯ್ಯೂರು : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಅ.5 ರಂದು ವರದಿಯಾಗಿದೆ.

ಸೆ.29 ರಂದು ಮಲೆಬೆಟ್ಟು ಕೋಡಿಮಾರು ನಿವಾಸಿ ಅಮೃತೇಶ್‌ ಕುಮಾರ್‌ ಎ ರವರು ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ಅವರ ಬಾಬ್ತು ಮೊಬೈಲ್‌ ನಲ್ಲಿದ್ದ ಟೆಲಿಗ್ರಾಂ ಅಪ್ಲಿಕೇಶನ್‌ ಗೆ ಯಾರೋ ಅಪಚಿರಿತರು https://ecommerecboostbranding.Com ವೆಬ್‌ ಸೈಟ್‌ ನ ಲಿಂಕ್‌ ನ್ನು ಕಳುಹಿಸಿ ನೊಂದಾಯಿಸಿಕೊಂಡು ಆನ್‌ ಲೈನ್‌ ವಸ್ತುಗಳನ್ನು ಉತ್ತೇಜಿಸಿದಲ್ಲಿ ಸಂಬಳದ ರೂಪದಲ್ಲಿ ಖಾತೆಗೆ ಹಣ ಜಮಾ ಮಾಡಲಾಗುವುದೆಂದು ತಿಳಿಸಿದಂತೆ, ಅಮೃತೇಶ್‌ ಕುಮಾರ್‌ ರವರು ವಂಚಕರ ಮಾರ್ಗದರ್ಶನದಂತೆ ಸದ್ರಿ ಲಿಂಕ್‌ ನ್ನು ಓಪನ್‌ ಮಾಡಿ ನೊಂದಾಯಿಸಿ ಕೊಂಡು ಅವರು ನೀಡಿರುವ ಟಾಸ್ಕನ್ನು ಮುಂದುವರಿಸುತ್ತಾ ಹೋದಂತೆ, ಟಾಸ್ಕನ್ನು ಮುಕ್ತಾಯಗೊಳಿಸಲು ಠೇವಣಿ ರೂಪದಲ್ಲಿ ಹಣ ಸಂದಾಯ ಮಾಡಬೇಕಾಗಿ ಮತ್ತು ವಿಶೇಷ ಬೋನಸ್‌ ಲಭಿಸಿದಲ್ಲಿ ದೊರೆಯುವ ಬೋನಸ್‌ ಪಡೆಯಲು ಠೇವಣಿ ಹಣವನ್ನು ಮತ್ತೆ ಮತ್ತೆ ಪಾವತಿಸಲು ತಿಳಿಸಿದಂತೆ ಅಮೃತೇಶ್‌ ಕುಮಾರ್‌ ಅವರ ವಿವಿಧ ಬ್ಯಾಂಕ್‌ ಖಾತೆಯಿಂದ ಅಪರಿಚಿತ ವ್ಯಕ್ತಿಯ ವಿವಿಧ ಬ್ಯಾಂಕ್‌ ಖಾತೆಗೆ ಒಟ್ಟು 19,90,442/- ರೂ ಹಣವನ್ನು ಹಂತ-ಹಂತವಾಗಿ ವರ್ಗಾಯಿಸಿದ್ದು, ಜಮಾ ಮಾಡಿದ ಹಣವನ್ನು ವಾಪಾಸ್ಸು ನೀಡದೇ ನಂಬಿಸಿ ಮೋಸ ಮಾಡಿ ವಂಚಿಸಿದ್ದು ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನಂತೆ ಅಪರಿಚಿತರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 85/2024 ಕಲಂ: 318(2) 318(4) BNS – 2023 & 66(D) IT ACT 2008 ದೂರು ದಾಖಲಾಗಿ ತನಿಖೆಯಲ್ಲಿರುತ್ತದೆ.

Related posts

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya
error: Content is protected !!