ಕನ್ಯಾಡಿ: ಯಕ್ಷಭಾರತಿ ದಶಮಾನೋತ್ಸವ ಸಮಿತಿ ರಚನೆ

Suddi Udaya

ಕನ್ಯಾಡಿ : ಯಕ್ಷಭಾರತಿ ಕನ್ಯಾಡಿ ಸಂಸ್ಥೆ ಹತ್ತು ವರ್ಷಗಳನ್ನು ಪೂರೈಸಿದ್ದು ದಶಮಾನೋತ್ಸವ ಸಮಾರಂಭದ ಯಶಸ್ವಿ ನಿರ್ವಹಣೆಗಾಗಿ ಸಮಿತಿ ರಚನೆ ಮಾಡಲಾಗಿದೆ.

ನೂತನ ಸಮಿತಿಯ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಸುರಭಿ, ಉಪಾಧ್ಯಕ್ಷರಾಗಿ ಲಕ್ಷ್ಮಣ ಸೂರ್ಯ ಉಜಿರೆ, ಡಾ. ಎಮ್ ಎಮ್ ದಯಾಕರ್, ಶ್ರೀನಿವಾಸ ರಾವ್ ಕಲ್ಮಂಜ, ಕಾರ್ಯದರ್ಶಿಯಾಗಿ ವಿದ್ಯಾ ಕುಮಾರ್ ಕಾಂಚೋಡು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಕುರ್ಮಾಣಿ , ಸಂಘಟನಾ ಕಾರ್ಯದರ್ಶಿಯಾಗಿ ಸುದರ್ಶನ ಕೆ.ವಿ, ಕೋಶಾಧಿಕಾರಿಯಾಗಿ ಕುಸುಮಾಕರ ಕೊತ್ತೋಡಿ
ಮಹಿಳಾ ಸದಸ್ಯರಾಗಿ ಶ್ರೀಮತಿ ಚಂದ್ರಾವತಿ, ಶ್ರೀಮತಿ ವೇದಾ, ಶ್ರೀಮತಿ ಸವಿತಾ ಎಮ್ ರಾವ್, ಶ್ರೀಮತಿ ಸುಪ್ರೀತಾ ಆಯ್ಕೆಯಾಗಿದ್ದಾರೆ.

Leave a Comment

error: Content is protected !!