25.3 C
ಪುತ್ತೂರು, ಬೆಳ್ತಂಗಡಿ
May 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಸಂಚಾರಕ್ಕೆ ತೀವ್ರ ಸಮಸ್ಯೆ ತಂದೊಡ್ಡಿದ್ದ ರಸ್ತೆಯನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿ ತಾತ್ಕಾಲಿಕ ಸಂಚಾರಕ್ಕೆ ಸಹಕರಿಸಿದ್ದಾರೆ.
ನೆರಿಯ ಗ್ರಾಮದ ಬಯಲು- ಬಸ್ತಿ- ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.


ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ. ಇದಕ್ಕೆ ಊರವರು ಸಹಕಾರ ನೀಡಿದರು.


ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಎಕ್ಸೆಲ್ ಕಾಲೇಜಿನ ಸಿ.ಎ ಮತ್ತು ಸಿ.ಎಸ್ ತರಬೇತಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

Suddi Udaya

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya
error: Content is protected !!