26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಧರ್ಮಸ್ಥಳದಲ್ಲಿ ಅ.3ರಿಂದ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯವರ ದಿವ್ಯ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿಯಲ್ಲಿ ನಡೆಯುತ್ತಿದೆ.

ಅ.7 ರಂದು ಸ್ಕಂದ ಮಾತೆ ದೇವಿಗೆ ಹಾಗೂ ಶ್ರೀ ದುರ್ಗಾ ಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಹಾಗೂ ಚಂಡಿಕಾಯಾಗ ನಡೆಯಿತು.

ಅ.3ರಿಂದ ಶೈಲಪುತ್ರಿ ದೇವಿ ಹಾಗೂ ಬ್ರಾಹ್ಮಣಿ ದೇವಿಗೆ, ಚಂದ್ರಘಂಟಾ ದೇವಿಗೆ ಅನ್ನಪೂರ್ಣೇಶ್ವರಿ ದೇವಿಗೆ ವಿಶೇಷ ಪೂಜೆ ಜರಗಿತು.

ಕಾರ್ಯಕ್ರಮದಲ್ಲಿ ಸೇವಾಕರ್ತರು, ಭಕ್ತರು, ಅರ್ಚಕ ವೃಂದ, ಸಿಬ್ಬಂದಿಗಳು, ರಥ ಬೀದಿ ವ್ಯಾಪಾರಸ್ಥರು ಭಾಗವಹಿಸಿದ್ದರು. ಅ.8ರಂದು ಕಾತ್ಯಾಯಿನಿ ದೇವಿಗೆ ವಿಶೇಷ ಪೂಜೆ, ಅ.9ರಂದು ಕಾಳರಾತ್ರಿ ದೇವಿಗೆ ವಿಶೇಷ ಪೂಜೆ, ಅ.10ರಂದು ಮಹಾಗೌರಿ ದೇವಿಗೆ ವಿಶೇಷ ಪೂಜೆ, ಅ.11ರಂದು ಸಿದ್ದಿದಾತ್ರಿ ದೇವಿಗೆ ವಿಶೇಷ ಪೂಜೆ, ಅ.12ರಂದು ವಿಜಯದಶಮಿ ವಿಶೇಷ ಪೂಜೆ, ಆಯುಧ ಪೂಜೆ ನಡೆಯಲಿದೆ.

Related posts

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಡಿ 19 :ಉಜಿರೆ  ಗ್ರಾ.ಪಂ.ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಗ್ರಾಮೀಣ ಪ್ರತಿಭೆ ಉತ್ತಮ‌ ಸಾಧನೆ, ಅಂಡಿಂಜೆಯ ದ್ವಿಶಾನ್ ಜೈನ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya
error: Content is protected !!