July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೂಲಕ ನಮ್ಮ ಯಶಸ್ವ ಇರುತ್ತದೆ. ಸ್ವಯಂ ಶಿಸ್ತು ಅಳವಡಿಸಿಕೊಂಡು ಉತ್ತಮ ಆಚಾರ, ವಿಚಾರ ಗಳನ್ನು ಅನುಸರಿಸಿ, ಜೊತೆಗೆ ಉತ್ತಮವಾದ ಆಹಾರ ಪದ್ಧತಿ ಅಳವಡಿಸಿಕೊಂಡು ಅದಕ್ಕೆ ಸರಿಯಾದ ವಿಹಾರ ಮಾಡಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಗಳಿಸಬಹುದು. ಇದಕ್ಕೆ ಪೂರಕವಾಗಿ ನಿಮಗೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್ ಸೆಟ್ ಸಂಸ್ಥೆಯಲ್ಲಿ ಅತ್ಯತ್ತುಮವಾದ ತರಬೇತಿಯನ್ನು ಪಡೆದುಕೊಂಡಿದ್ದೀರಿ ಅದನ್ನು ಜೀವನದಲ್ಲಿ ಮತ್ತು ಸ್ವ ಉದ್ಯೋಗದಲ್ಲಿ ಉಪಯೋಗಿಸಿಕೊಂಡು ಯಶಸ್ವಿಗಳಿಸಿ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಶುಂಪಾಲರಾದ ಡಾ. ಬಿ. ಎ. ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು.

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆದೆ * ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪ್ರಮಾಣ ಪತ್ರ ವಿತ್ತರಿಸಿ ಮಾತನಾಡಿದರು. ಮೌಲ್ಯ ಮತ್ತು ಕೌಶಲ್ಯವನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.ವಿಜಯ ಕುಮಾರ್ ವಹಿಸಿ, ಮಾತನಾಡಿದರು ಸರಕಾರ ಮತ್ತು ಬ್ಯಾಂಕಿನ ಹೊಸ ಯೋಜನೆಯ ಮೂಲಕ ಸಹಾಯಧನ, ಸಾಲ ಪಡೆದುಕೊಂಡು ಉದ್ಯಮ ಆರಂಭಿಸಿ, ಏನಾದರೂ ಮಾಹಿತಿ-ಮಾರ್ಗದರ್ಶನ ಬೇಕಾದರೆ ಸಂಸ್ಥೆಯನ್ನು ಸಂಪರ್ಕಿಸಿ ಎಂದು ಶುಭ ಕೋರಿದರು.

ಅತಿಥಿಗಳನ್ನು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ಸ್ವಾಗತಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ *ಅಬ್ರಹಾಂ ಜೇಮ್ಸ್* ಕಾರ್ಯಕ್ರಮ ನಿರೂಪಿಸಿದರು ಉಪನ್ಯಾಸಕ ಕೆ.ಕರುಣಾಕರ ಜೈನ್* ವಂದಿಸಿದರು. ಸುಮಾರು 27 ಜನ ಶಿಬಿರಾರ್ಥಿಗಳ ಭಾಗವಹಿಸಿದ್ದರು, ಸಂದೀಪ್ ಮತ್ತು ಯೋಗೀಶ್ ಪ್ರಾರ್ಥನೆ ಮಾಡಿದರು, ಗಣೇಶ್, ರಮೇಶ್, ಗುರುಕಿರಣ್ ತರಬೇತಿಯ ಅನುಭವ ಹಂಚಿಕೊಂಡರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ‌ ಸ್ಥಾನ: ಸೈಂಟ್ ಮೆರೀಸ್ ಆಂ.ಮಾ. ಶಾಲಾ ವಿದ್ಯಾರ್ಥಿನಿ ಸಂಜನಾ ಎಂ.ಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya
error: Content is protected !!