July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

ಕೊಯ್ಯೂರು : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಅ.5 ರಂದು ವರದಿಯಾಗಿದೆ.

ಸೆ.29 ರಂದು ಮಲೆಬೆಟ್ಟು ಕೋಡಿಮಾರು ನಿವಾಸಿ ಅಮೃತೇಶ್‌ ಕುಮಾರ್‌ ಎ ರವರು ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ಅವರ ಬಾಬ್ತು ಮೊಬೈಲ್‌ ನಲ್ಲಿದ್ದ ಟೆಲಿಗ್ರಾಂ ಅಪ್ಲಿಕೇಶನ್‌ ಗೆ ಯಾರೋ ಅಪಚಿರಿತರು https://ecommerecboostbranding.Com ವೆಬ್‌ ಸೈಟ್‌ ನ ಲಿಂಕ್‌ ನ್ನು ಕಳುಹಿಸಿ ನೊಂದಾಯಿಸಿಕೊಂಡು ಆನ್‌ ಲೈನ್‌ ವಸ್ತುಗಳನ್ನು ಉತ್ತೇಜಿಸಿದಲ್ಲಿ ಸಂಬಳದ ರೂಪದಲ್ಲಿ ಖಾತೆಗೆ ಹಣ ಜಮಾ ಮಾಡಲಾಗುವುದೆಂದು ತಿಳಿಸಿದಂತೆ, ಅಮೃತೇಶ್‌ ಕುಮಾರ್‌ ರವರು ವಂಚಕರ ಮಾರ್ಗದರ್ಶನದಂತೆ ಸದ್ರಿ ಲಿಂಕ್‌ ನ್ನು ಓಪನ್‌ ಮಾಡಿ ನೊಂದಾಯಿಸಿ ಕೊಂಡು ಅವರು ನೀಡಿರುವ ಟಾಸ್ಕನ್ನು ಮುಂದುವರಿಸುತ್ತಾ ಹೋದಂತೆ, ಟಾಸ್ಕನ್ನು ಮುಕ್ತಾಯಗೊಳಿಸಲು ಠೇವಣಿ ರೂಪದಲ್ಲಿ ಹಣ ಸಂದಾಯ ಮಾಡಬೇಕಾಗಿ ಮತ್ತು ವಿಶೇಷ ಬೋನಸ್‌ ಲಭಿಸಿದಲ್ಲಿ ದೊರೆಯುವ ಬೋನಸ್‌ ಪಡೆಯಲು ಠೇವಣಿ ಹಣವನ್ನು ಮತ್ತೆ ಮತ್ತೆ ಪಾವತಿಸಲು ತಿಳಿಸಿದಂತೆ ಅಮೃತೇಶ್‌ ಕುಮಾರ್‌ ಅವರ ವಿವಿಧ ಬ್ಯಾಂಕ್‌ ಖಾತೆಯಿಂದ ಅಪರಿಚಿತ ವ್ಯಕ್ತಿಯ ವಿವಿಧ ಬ್ಯಾಂಕ್‌ ಖಾತೆಗೆ ಒಟ್ಟು 19,90,442/- ರೂ ಹಣವನ್ನು ಹಂತ-ಹಂತವಾಗಿ ವರ್ಗಾಯಿಸಿದ್ದು, ಜಮಾ ಮಾಡಿದ ಹಣವನ್ನು ವಾಪಾಸ್ಸು ನೀಡದೇ ನಂಬಿಸಿ ಮೋಸ ಮಾಡಿ ವಂಚಿಸಿದ್ದು ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನಂತೆ ಅಪರಿಚಿತರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 85/2024 ಕಲಂ: 318(2) 318(4) BNS – 2023 & 66(D) IT ACT 2008 ದೂರು ದಾಖಲಾಗಿ ತನಿಖೆಯಲ್ಲಿರುತ್ತದೆ.

Related posts

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ರಕ್ತದಾನದ ಜಾಗೃತಿ – ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಲಾಯಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya
error: Content is protected !!