23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

ಕೊಯ್ಯೂರು : ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ಸುಮಾರು ರೂ.19.90 ಲಕ್ಷ ವಂಚಿಸಿದ ಘಟನೆ ಅ.5 ರಂದು ವರದಿಯಾಗಿದೆ.

ಸೆ.29 ರಂದು ಮಲೆಬೆಟ್ಟು ಕೋಡಿಮಾರು ನಿವಾಸಿ ಅಮೃತೇಶ್‌ ಕುಮಾರ್‌ ಎ ರವರು ಟೆಲಿಗ್ರಾಂ ಆ್ಯಪ್ ಮೂಲಕ ಪರಿಚಯವಾದ ಯಾರೋ ಅಪರಿಚಿತರು ತಾತ್ಕಾಲಿಕ ನೆಲೆಯಲ್ಲಿ ಉದ್ಯೋಗ ನೀಡುವುದಾಗಿ ಅವರ ಬಾಬ್ತು ಮೊಬೈಲ್‌ ನಲ್ಲಿದ್ದ ಟೆಲಿಗ್ರಾಂ ಅಪ್ಲಿಕೇಶನ್‌ ಗೆ ಯಾರೋ ಅಪಚಿರಿತರು https://ecommerecboostbranding.Com ವೆಬ್‌ ಸೈಟ್‌ ನ ಲಿಂಕ್‌ ನ್ನು ಕಳುಹಿಸಿ ನೊಂದಾಯಿಸಿಕೊಂಡು ಆನ್‌ ಲೈನ್‌ ವಸ್ತುಗಳನ್ನು ಉತ್ತೇಜಿಸಿದಲ್ಲಿ ಸಂಬಳದ ರೂಪದಲ್ಲಿ ಖಾತೆಗೆ ಹಣ ಜಮಾ ಮಾಡಲಾಗುವುದೆಂದು ತಿಳಿಸಿದಂತೆ, ಅಮೃತೇಶ್‌ ಕುಮಾರ್‌ ರವರು ವಂಚಕರ ಮಾರ್ಗದರ್ಶನದಂತೆ ಸದ್ರಿ ಲಿಂಕ್‌ ನ್ನು ಓಪನ್‌ ಮಾಡಿ ನೊಂದಾಯಿಸಿ ಕೊಂಡು ಅವರು ನೀಡಿರುವ ಟಾಸ್ಕನ್ನು ಮುಂದುವರಿಸುತ್ತಾ ಹೋದಂತೆ, ಟಾಸ್ಕನ್ನು ಮುಕ್ತಾಯಗೊಳಿಸಲು ಠೇವಣಿ ರೂಪದಲ್ಲಿ ಹಣ ಸಂದಾಯ ಮಾಡಬೇಕಾಗಿ ಮತ್ತು ವಿಶೇಷ ಬೋನಸ್‌ ಲಭಿಸಿದಲ್ಲಿ ದೊರೆಯುವ ಬೋನಸ್‌ ಪಡೆಯಲು ಠೇವಣಿ ಹಣವನ್ನು ಮತ್ತೆ ಮತ್ತೆ ಪಾವತಿಸಲು ತಿಳಿಸಿದಂತೆ ಅಮೃತೇಶ್‌ ಕುಮಾರ್‌ ಅವರ ವಿವಿಧ ಬ್ಯಾಂಕ್‌ ಖಾತೆಯಿಂದ ಅಪರಿಚಿತ ವ್ಯಕ್ತಿಯ ವಿವಿಧ ಬ್ಯಾಂಕ್‌ ಖಾತೆಗೆ ಒಟ್ಟು 19,90,442/- ರೂ ಹಣವನ್ನು ಹಂತ-ಹಂತವಾಗಿ ವರ್ಗಾಯಿಸಿದ್ದು, ಜಮಾ ಮಾಡಿದ ಹಣವನ್ನು ವಾಪಾಸ್ಸು ನೀಡದೇ ನಂಬಿಸಿ ಮೋಸ ಮಾಡಿ ವಂಚಿಸಿದ್ದು ಅಪರಿಚಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನಂತೆ ಅಪರಿಚಿತರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ : 85/2024 ಕಲಂ: 318(2) 318(4) BNS – 2023 & 66(D) IT ACT 2008 ದೂರು ದಾಖಲಾಗಿ ತನಿಖೆಯಲ್ಲಿರುತ್ತದೆ.

Related posts

ಕೊಲ್ಲಿ: ಶ್ರೀ ದುರ್ಗಾ ಬ್ಯೂಟಿಪಾರ್ಲರ್ ಶುಭಾರಂಭ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ಅರಸಿನಮಕ್ಕಿ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ವರದ ಶಂಕರ ದಾಮ್ಲೆ, ಉಪಾಧ್ಯಕ್ಷರಾಗಿ ಸೀತಾ ಎ ಆಯ್ಕೆ

Suddi Udaya

ಕುದ್ಯಾಡಿ ಸ. ಕಿ. ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಅಂಡಿಂಜೆಯಲ್ಲಿ ಭಟ್ಸ್ ಮೆಡಿಕಲ್ ಶುಭಾರಂಭ

Suddi Udaya
error: Content is protected !!