ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಸಂಚಾರಕ್ಕೆ ತೀವ್ರ ಸಮಸ್ಯೆ ತಂದೊಡ್ಡಿದ್ದ ರಸ್ತೆಯನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿ ತಾತ್ಕಾಲಿಕ ಸಂಚಾರಕ್ಕೆ ಸಹಕರಿಸಿದ್ದಾರೆ.
ನೆರಿಯ ಗ್ರಾಮದ ಬಯಲು- ಬಸ್ತಿ- ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.


ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ. ಇದಕ್ಕೆ ಊರವರು ಸಹಕಾರ ನೀಡಿದರು.


ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Leave a Comment

error: Content is protected !!