25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಸಂಚಾರಕ್ಕೆ ತೀವ್ರ ಸಮಸ್ಯೆ ತಂದೊಡ್ಡಿದ್ದ ರಸ್ತೆಯನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿ ತಾತ್ಕಾಲಿಕ ಸಂಚಾರಕ್ಕೆ ಸಹಕರಿಸಿದ್ದಾರೆ.
ನೆರಿಯ ಗ್ರಾಮದ ಬಯಲು- ಬಸ್ತಿ- ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.


ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ. ಇದಕ್ಕೆ ಊರವರು ಸಹಕಾರ ನೀಡಿದರು.


ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ 2 ದಿನದ ತರಬೇತಿ ಕಾರ್ಯಾಗಾರ

Suddi Udaya

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya
error: Content is protected !!