22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

ಸಂಚಾರಕ್ಕೆ ತೀವ್ರ ಸಮಸ್ಯೆ ತಂದೊಡ್ಡಿದ್ದ ರಸ್ತೆಯನ್ನು ಎನ್ನೆಸ್ಸೆಸ್ ವಿದ್ಯಾರ್ಥಿಗಳು ದುರಸ್ತಿಗೊಳಿಸಿ ತಾತ್ಕಾಲಿಕ ಸಂಚಾರಕ್ಕೆ ಸಹಕರಿಸಿದ್ದಾರೆ.
ನೆರಿಯ ಗ್ರಾಮದ ಬಯಲು- ಬಸ್ತಿ- ಪೆರಿಯಡ್ಕ ಮೂಲಕ ಧರ್ಮಸ್ಥಳಕ್ಕೆ ಸಾಗುವ ಡಾಮಾರು ರಸ್ತೆ ತೀರಾ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ ಎದುರಾಗಿತ್ತು.


ಮುಂಡಾಜೆ ಪಿಯು ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ನೆರಿಯದಲ್ಲಿ ನಡೆಯುತ್ತಿರುವ ವಾರ್ಷಿಕ ಶಿಬಿರದ ಒಂದು ದಿನ ಈ ರಸ್ತೆಗೆ ಸುಮಾರು 20 ಲೋಡ್ ಚರಲ್ ಹಾಕುವ ಮೂಲಕ ರಸ್ತೆಯ ನಾಲ್ಕು ಕಿಮೀ ಪ್ರದೇಶವನ್ನು ದುರಸ್ತಿಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅಣಿಗೊಳಿಸಿದ್ದಾರೆ. ಇದಕ್ಕೆ ಊರವರು ಸಹಕಾರ ನೀಡಿದರು.


ಪ್ರಮುಖರಾದ ಸೋಮನಾಥ ಗೌಡ ಮಾಕಳ, ರಾಘವ ಗೌಡ ಕುಡುಮಡ್ಕ, ವೆಂಕಟರಮಣ ಗೌಡ ಕೆಮ್ಮಟೆ ಇವರ ಮುಂದಾಳತ್ವದಲ್ಲಿ ಪುಷ್ಪಾಕರ, ಸಂತೋಷ, ಯಶ್ವಿನ್, ಪವನ್, ದಯಾಕರ ಗೌಡ ಮತ್ತಿತರರು ಸಹಕರಿಸಿದರು.

Related posts

ಅಕ್ರಮ ದಾಸ್ತಾನು ಡಿಸೇಲ್ ಪತ್ತೆ ಪ್ರಕರಣ:ಡಿಸೇಲ್ ಹರಾಜು ಮಾಡಿದ ಕಂದಾಯ ಇಲಾಖೆ

Suddi Udaya

ಮೇಲಂತಬೆಟ್ಟು: ಶಾಂತಿನಗರ ನಿವಾಸಿ ಐಸಾಕ್ ಡಿಸೋಜಾ ನಿಧನ

Suddi Udaya

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಕನ್ಯಾಡಿ I: ಅಂತರ ಮನೆ ನಿವಾಸಿ ವಿಜಯ ಗೌಡ ನಿಧನ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya
error: Content is protected !!