23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ನಿಡ್ಲೆ: ಕಜೆ ನಿವಾಸಿ ಸರಸ್ವತಿ ನಿಧನ

Suddi Udaya

ಧರ್ಮಸ್ಥಳ : ನಡುಗುಡ್ಡೆಯಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್

Suddi Udaya

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!