22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ಗರ್ಡಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ರೂ. 95.58 ಲಕ್ಷ ಸರಕಾರದಿಂದ ಅನುದಾನ ಬಿಡುಗಡೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya
error: Content is protected !!