September 6, 2026
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಆ. 5: ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನಾ ಸಮಾರಂಭ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya
error: Content is protected !!