ಗ್ರಾಮಾಂತರ ಸುದ್ದಿ

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

ಬೆಳ್ತಂಗಡಿ : ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ.
ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿದೆ.

ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ನದಿಯಲ್ಲಿ ಹರಿದು ಬಂದಿದೆ. ಮಂಗಳವಾರ ರಾತ್ರಿಯ ವೇಳೆ ಇದೇ ರೀತಿಯಲ್ಲಿ ನೆರಿಯ ಹೊಳೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು . ಇದೀಗ ಬುಧವಾರ ಮತ್ತೆ ಪ್ರವಾಹದಂತೆ ನದಿಯಲ್ಲಿ ನೀರು ಬಂದಿರುವುದು ಜನರಲ್ಲಿ ಭಯ ಮೂಡಿಸಿದೆ.

ಅಪರಾಹ್ನ ನೆರಿಯ ಪ್ರದೇಶದಲ್ಲಿ ಸಾಮಾನ್ಯ ಮಳೆ ಮಾತ್ರ ಸುರಿದಿದೆ. ಆದರೂ ನದಿಯಲ್ಲಿ ಹಾಗೂ ತೊರೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗಿದೆ.
ಚಾರ್ಮಾಡಿ ಘಾಟಿಯ ಮೇಲ್ಬಾಗದಿಂದ ಹರಿದು ಬಂದ ನೀರು ನೇರವಾಗಿ ನೆರಿಯ ಹಳ್ಳವನ್ನು ಸೇರುತ್ತಿದ್ದು ಘಾಟಿಯ ಮೇಲ್ಬಾಗದಲ್ಲಿ ಸುರಿದ ಮಳೆಯಿಂದಾಗಿ
ನೆರಿಯದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷರಾಗಿ ತುಕರಾಮ್ ಬಿ., ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya
error: Content is protected !!