July 23, 2026
ಗ್ರಾಮಾಂತರ ಸುದ್ದಿ

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

ಬೆಳ್ತಂಗಡಿ : ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ.
ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿದೆ.

ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ನದಿಯಲ್ಲಿ ಹರಿದು ಬಂದಿದೆ. ಮಂಗಳವಾರ ರಾತ್ರಿಯ ವೇಳೆ ಇದೇ ರೀತಿಯಲ್ಲಿ ನೆರಿಯ ಹೊಳೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು . ಇದೀಗ ಬುಧವಾರ ಮತ್ತೆ ಪ್ರವಾಹದಂತೆ ನದಿಯಲ್ಲಿ ನೀರು ಬಂದಿರುವುದು ಜನರಲ್ಲಿ ಭಯ ಮೂಡಿಸಿದೆ.

ಅಪರಾಹ್ನ ನೆರಿಯ ಪ್ರದೇಶದಲ್ಲಿ ಸಾಮಾನ್ಯ ಮಳೆ ಮಾತ್ರ ಸುರಿದಿದೆ. ಆದರೂ ನದಿಯಲ್ಲಿ ಹಾಗೂ ತೊರೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗಿದೆ.
ಚಾರ್ಮಾಡಿ ಘಾಟಿಯ ಮೇಲ್ಬಾಗದಿಂದ ಹರಿದು ಬಂದ ನೀರು ನೇರವಾಗಿ ನೆರಿಯ ಹಳ್ಳವನ್ನು ಸೇರುತ್ತಿದ್ದು ಘಾಟಿಯ ಮೇಲ್ಬಾಗದಲ್ಲಿ ಸುರಿದ ಮಳೆಯಿಂದಾಗಿ
ನೆರಿಯದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

Related posts

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ : ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರು ಕಳವು : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya
error: Content is protected !!