March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಗುರಿಪಳ್ಳ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತನ್ನ ಸಾಂತ್ವನ ನಿಧಿಯಿಂದ ಒಟ್ಟುಗೂಡಿಸಿದ ಸಹಾಯಧನದ ಮೊತ್ತವನ್ನು ಇತ್ತೀಚೆಗೆ ಸುರಿದ ಭಾರಿ ಮಳೆಗೆ ತನ್ನ ಮನೆಯ ಒಂದು ಪಾರ್ಶ್ವ ಸಂಪೂರ್ಣ ಬಿರುಕುಗೊಂಡು ಮನೆ ಸಂಪೂರ್ಣ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಹೆಬ್ಬಾರ್ ದೊಡಿ ನಿವಾಸಿ ನೋಣಯ್ಯ ಪೂಜಾರಿ ಇವರ ಕುಟುಂಬಕ್ಕೆ ಹತ್ತು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸುವ ಮೂಲಕ ವಿತರಿಸಲಾಯಿತು.

ನೋಣಯ್ಯ ಪೂಜಾರಿಯವರ ಪತ್ನಿ ಶ್ರೀಮತಿ ಬೇಬಿ ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರಿಂದ ಚೆಕ್ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರಾದ ಗುರುರಾಜ್ ಗುರಿಪಳ್ಳ, ಜಯ ಕುಮಾರ್ ನಡ, ಚಂದ್ರಶೇಖರ್ ಇಂದಬೆಟ್ಟು, ಗ್ರಾಮ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್, ಯುವವಾಹಿನಿ ಸಂಚಾಲನ ಸಮಿತಿ ಗುರಿಪಳ್ಳ ಅಧ್ಯಕ್ಷ ಜಯರಾಮ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಶ್ರೀಮತಿ ದೇವಕಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಕೊಕ್ಕಡ: ಕಾಡಾನೆಗಳ ಹಾವಳಿ : ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಬೀದಿ ಬದಿಯ ಅಂಗಡಿಗಳ ತೆರವು ಕಾರ್ಯ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ “ಅಂತರಾಷ್ಟ್ರೀಯ ಯೋಗ ದಿನಾಚರಣೆ”

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya
error: Content is protected !!