22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ನಿಯುಕ್ತರಾಗಿದ್ದ ಮನೋಹರ ಕುಮಾರ್ ಎ. ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಳ್ತಂಗಡಿ ಪ್ರಧಾನ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯ ಮತ್ತು ಹೆಚ್ಚವರಿ ಸಿವಿಲ್ ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯದಲ್ಲಿ ದಾಖಲಾಗುವ ಪ್ರಕರಣಗಳ ಹೆಚ್ಚುವರಿ ಹೊಣೆ ವಹಿಸಿಕೊಳ್ಳುವಂತೆ ಸರಕಾರ ಅದೇಶಿಸಿರುತ್ತದೆ.

ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಸನ್ಮಾನ್ಯ ಯು. ಟಿ ಖಾದರ್ ರವರ ಸೂಚನೆ ಮೇರೆಗೆ ಸರ್ಕಾರದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಯ (ಆಡಳಿತ -2) ಅದೀನ ಕಾರ್ಯದರ್ಶಿಗಳಾದ ಆದಿನಾರಾಯಣ ರವರು ಈ ಆದೇಶ ನೀಡಿರುತ್ತಾರೆ.

ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರ ಶಿಫಾರಸ್ಸಿನ ಮೇರೆಗೆ ಈ ಹೆಚ್ಚುವರಿ ಹೊಣೆ ವಹಿಸುವಂತೆ ವಿಧಾನ ಸಭಾಧ್ಯಕ್ಷರು ಸೂಚನೆ ನೀಡಿದ್ದರು.

Related posts

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ಗುರುವಾಯನಕೆರೆ: ವರದ ಪಾಂಡುರಂಗ ವಿಠಲ ಮಂದಿರದ ಕಾಣಿಕೆ ಡಬ್ಬಿ ಹಣ ಕಳವು

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya
error: Content is protected !!