September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ.

ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ.

2019ರಲ್ಲಿ ಪ್ರವಾಹ ಬಂದ ನಂತರ, ಅಂತರ್ಜಲ ಅಭಿವೃದ್ದಿ ಮತ್ತು ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು, ಕಿಂಡಿ ಅಣೆಕಟ್ಟು ಸ್ಥಳೀಯ ತೋಟದ ಮಟ್ಟಕ್ಕೆ ಸಮವಾಗಿರುವ ಕಾರಣ ಪ್ರವಾಹದಲ್ಲಿ ಕೊಚ್ಚಿ ಬಂದ ಮರದ ದಿಮ್ಮಿಗಳು ಕಿಂಡಿ ಅಣೆಕಟ್ಟಿನಲ್ಲಿ ನಿಂತು ನೀರು ತೋಟಗಳಿಗೆ ನುಗ್ಗುತ್ತಿದೆ.

ಅಸಮರ್ಪಕವಾದ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಸ್ಥಳೀಯ ನಾಯಕರುಗಳು ತಡೆಗೋಡೆ ಕಟ್ಟಿಸಿ ಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದು ಇದುವರೆಗೂ ಆ ಕೆಲಸವಾಗಿಲ್ಲ. ಪಂಚಾಯತ್‌ನವರಿಗೆ ಕರೆ ಮಾಡಿ ತಿಳಿಸಿದರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Related posts

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ರಾಷ್ಟ್ರಮಟ್ಟದ ಅತ್ಯುತ್ತಮ ಸಾಹಸ ಪ್ರವಾಸಿ ತಾಣ ಪ್ರಶಸ್ತಿ ಗೆದ್ದ ಕುತ್ಲೂರು ಗ್ರಾಮದ ಪ್ರತಿನಿಧಿಗಳಿಗೆ ಗೌರವಾರ್ಪಣೆ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಮಡಂತ್ಯಾರು ಸಿಎ ಬ್ಯಾಂಕ್‌ ವತಿಯಿಂದ ಮಡಂತ್ಯಾರು ಗ್ರಾ.ಪಂ. ಹಾಗೂ ಮಾಲಾಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ನೂತನ ಶಾಖೆ ‘ಕೋಟಕ್ ಲೈಫ್’ ಉದ್ಘಾಟನೆ

Suddi Udaya

ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣ: ಬಾಲಕಿಗೆ ಕೌನ್ಸೆಲಿಂಗ್ ನೀಡಿ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸಲಾಗುವುದು: ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆ

Suddi Udaya
error: Content is protected !!