September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

ನಾನು ಬದುಕಬೇಕು ಇನ್ನೊಬ್ಬರನ್ನೂ ಬದುಕಲು ಬಿಡಬೇಕು”: ಅಶ್ವಿನಿ ಎಸ್ ಶೆಟ್ಟಿ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಶೈಕ್ಷಣಿಕ ಕಾರ್ಯಕ್ರಮವಾದ “ದುಶ್ಚಟಗಳ ವಿರುದ್ಧ ಸ್ವರಕ್ಷಣಾ ಮಾರ್ಗೋಪಾಯಗಳು” ಎಂಬ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಮನೋವಿಜ್ಞಾನ ಸ್ನಾತಕೋತ್ತರ ಪದವಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಅಶ್ವಿನಿ ಎಸ್ ಶೆಟ್ಟಿ ಅವರು ವಿದ್ಯಾರ್ಥಿಗಳಿಗೆ, ‘ನಾವು ಅದೆಷ್ಟೋ ಸಲ ದುಶ್ಚಟಗಳಿಗೆ ನಮಗೆ ತಿಳಿಯದೆಯೇ ಬಲಿಯಾಗುತ್ತಿದ್ದೇವೆ. ನಮ್ಮ ಮೇಲೆ ನಾವೇ ನಂಬಿಕೆ ಇಡುವುದರಿಂದ ನಮ್ಮನ್ನು ನಾವು ಪ್ರೀತಿಸುವುದರಿಂದ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಯಬಹುದು. ಆದುದರಿಂದ ನಮ್ಮನ್ನು ನಾವೇ ಅರಿತುಕೊಂಡು ಬಾಳಬೇಕು’ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಡುಮಡ್ಕ ಅನ್ನಪೂರ್ಣೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೆಸರ ರಾಘವ ಗೌಡ ಕುಡುಮಡ್ಕ ವಹಿಸಿದ್ದರು.

ಅತಿಥಿಗಳಾಗಿ ಕೃಷ್ಣಪ್ಪ ಗೌಡ ಹಿರ್ತಡ್ಕ ಇವರು ಉಪಸ್ಥಿತರಿದ್ದರು.

ವೇದಿಕೆಯಲ್ಲಿ ಸೋಮನಾಥ ಗೌಡ ಮಾಕಳ, ಅಧ್ಯಕ್ಷರು ಶಿಬಿರ ನಿರ್ವಹಣಾ ಸಮಿತಿ, ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಷ್ ಚಂದ್ರ ಜೈನ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಶಿಬಿರಾರ್ಥಿ ಲತೇಶ್ ನಿರ್ವಹಿಸಿದರು. ಉಪನ್ಯಾಸಕರಾದ ಸುಭಾಷ್ ಚಂದ್ರ ಜೈನ್ ಸ್ವಾಗತಿಸಿ, ರೋಷನ್ ಧನ್ಯವಾದವಿತ್ತರು.

Related posts

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ಪಾದ ತಪಾಸಣಾ ಶಿಬಿರ

Suddi Udaya

ನಾವರ: ಇತ್ತೀಚೆಗೆ ನಿಧನರಾದ ಸುಧಾಕರ ರವರ ಕುಟುಂಬಸ್ಥರಿಗೆ ಪಿ.ಎಂ.ಜೆ.ಜೆ.ವೈ ಯೋಜನೆಯಡಿಯಲ್ಲಿ ವಿಮಾ ಪರಿಹಾರ ವಿತರಣೆ

Suddi Udaya
error: Content is protected !!