July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

ಉಜಿರೆ‌: ಗಾಯಗಳು ಹಾಗೂ ಅನಾರೋಗ್ಯದ ರೋಗಿಗಳಿಗೆ ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುತ್ತದೆ. ತುರ್ತು ಚಿಕಿತ್ಸೆ ಅಥವಾ ಎಮರ್ಜೆನ್ಸಿ ಮೆಡಿಸಿನ್‌ ಕ್ಷೇತ್ರದ ಪರಿಣಿತರು ಇಂತಹ ಚಿಕಿತ್ಸೆ ನೀಡುತ್ತಾರೆ.ಈ ವಿಶೇಷ ಸೇವೆ ಇಂದಿನಿಂದ ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಲಭ್ಯವಿದೆ ಎಂದು ಉಜಿರೆಯ ಬೆನಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಗೋಪಾಲಕೃಷ್ಣ ತಿಳಿಸಿದರು.

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ‌ ನಡೆದ ಸರಳ ಕಾರ್ಯಕ್ರಮದಲ್ಲಿ ಡಾ| ಗೋಪಾಲಕೃಷ್ಣ ಅವರು ತುರ್ತು ಚಿಕಿತ್ಸಾ ತಜ್ಞ ಡಾ. ಆದಿತ್ಯ ರಾವ್ ಅವರನ್ನು ಸ್ವಾಗತಿಸುತ್ತಾ ಮಾತನಾಡುತ್ತಿದ್ದರು.

ತುರ್ತು ಚಿಕಿತ್ಸೆಯ ಪರಿಣಿತ ವೈದ್ಯರು ಎಲ್ಲಾ ವಯಸ್ಸಿನ ರೋಗಿಗಳಿಗೆ ಚಿಕಿತ್ಸೆ ಮತ್ತು ಅಗತ್ಯ ಆರೈಕೆಯನ್ನು ನೀಡುತ್ತಾರೆ. ತುರ್ತುಸ್ಥಿತಿಯನ್ನು ದಾಟಿದ ನಂತರ ರೋಗಿಗಳಿಗೆ ಮಧ್ಯಂತರ ಅನುಸರಣಾ ಆರೈಕೆಯು ಸಹ ಒಳಗೊಂಡಿರುತ್ತದೆ ಎಂದು ತಿಳಿಸಿದರು. 

ತುರ್ತು ಚಿಕಿತ್ಸೆ ವೈದ್ಯರು ಭರವಸೆ ಮತ್ತು ಬೆಂಬಲದ ದಾರಿದೀಪಗಳಾಗಿ ಸೇವೆ ಸಲ್ಲಿಸುತ್ತಾರೆ. ಅವರ ಲಭ್ಯತೆ, ಮತ್ತು ಸುಧಾರಿತ ರೋಗನಿರ್ಣಯದ ಸಾಮರ್ಥ್ಯಗಳು ಸಕಾಲಿಕ ಮತ್ತು ಜೀವ ಸಂರಕ್ಷಣೆಯಲ್ಲಿ  ಪ್ರಮುಖ ಪಾತ್ರವನ್ನು ವಹಿಸುತ್ತವೆ. ಬೆಳ್ತಂಗಡಿ ತಾಲೂಕಿನಲ್ಲಿ ಮೊತ್ತ‌ಮೊದಲ ಬಾರಿಗೆ ಈ ವಿಶಿಷ್ಟ ಸೇವೆಯನ್ನು ಬೆನಕ ಆಸ್ಪತ್ರೆ ಒದಗಿಸಲಿದೆ ಎಂದು ತಿಳಿಸಿದರು.

ಗುಣಮಟ್ಟದ ತುರ್ತು ವೈದ್ಯಕೀಯ ಆರೈಕೆ ರಸ್ತೆ ಆಪಘಾತ, ಸೆಪ್ಸಿಸ್, ಪಾರ್ಶ್ವವಾಯು, ಹೃದಯಾಘಾತ, ಗರ್ಭಾವಸ್ಥೆಯ ಮತ್ತು ಹೆರಿಗೆಯ ತೀವ್ರ ತೊಡಕುಗಳು ಹಾಗೂ ಅನೇಕ ಬಾಲ್ಯದ ಸೋಂಕುಗಳ ವಿನಾಶಕಾರಿ ಪರಿಣಾಮಗಳನ್ನು ತಡೆಯುತ್ತದೆ ಅಥವಾ ಕಡಿಮೆ ಮಾಡುತ್ತದೆ ಎಂದು ತುರ್ತು ಚಿಕಿತ್ಸಾ ತಜ್ಞ ಡಾ. ಆದಿತ್ಯ ರಾವ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಡಾ.ಭಾರತಿ ಜಿ.ಕೆ, ಡಾ. ಅಂಕಿತಾ ಜಿ.ಭಟ್, ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಜಿ.ಭಟ್ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಸನ್ಮಾನ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಮೇಲಂತಬೆಟ್ಟು ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya
error: Content is protected !!