ಓಡಿಲ್ನಾಳ: ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ 2ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮ ಪ್ರಧಾನ ಅರ್ಚಕರಾದ ಪ್ರಸನ್ನ ಭಟ್ ಅವರ ನೇತ್ರತ್ವದಲ್ಲಿ ಅ.8 ಮತ್ತು ಅ.9ರಂದು ವಿಜೃಂಭನೆಯಿಂದ ನಡೆಯಲಿದೆ.

ಅ.8 ರಂದು ಬೆಳಿಗ್ಗೆ ಗಣಹೋಮ ಕಿರಾತ ಮೂರ್ತಿ ದೇವರಿಗೆ ರುದ್ರಾಭಿಷೇಕ, ಮಹಾಪೂಜೆ, ರಾತ್ರಿ ದುರ್ಗಾ ದೀಪ ನಮಸ್ಕಾರ ಪೂಜೆ ಜರಗಿತು. ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ವಿಠಲ್ ನಾಯಕ್ ಕಲ್ಲಡ್ಕ ಮತ್ತು ಬಳಗದವರಿಂದ ತುಳು ಗೀತ- ಸಾಹಿತ್ಯ- ಸಂಭ್ರಮ ನಡೆಯಿತು.











