24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

ಉಪ್ಪಿನಂಗಡಿ: ಇಲ್ಲಿಯ ಸಮೀಪದ ಕರಾಯದಲ್ಲಿ ಮತ ಬೌತಿಕ ಸಮನ್ವಯ ಶಿಕ್ಷಣ ಸಂಸ್ಥೆಯಾದ ಪ್ರತಿಷ್ಠಿತ ಅಲ್ ಬರ್ರ್ ಶಾಲೆಯಲ್ಲಿ ಮೀಲಾದ್ ಪ್ರಯುಕ್ತ ಇಶ್ಕೇ ರಸೂಲ್ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಕಲಾ ಪ್ರದರ್ಶನ, ವಿವಿಧ ರೀತಿಯ ಸ್ಪರ್ಧೆ ಗಳು, ಪ್ಲವರ್ ಶೋ, ಮೌಲಿದ್ ಮಜ್ಲಿಸ್ ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಹಬೀಬು ರ್ರಹ್ಮಾನ್ ತಂಙಳ್ ಕಲ್ಲೇರಿ ದುಹಾ ಮೂಲಕ ನೆರವೇರಿಸಿದರು.

ಮುಖ್ಯ ಭಾಷಣಗೈದ ಎಸ್ ಬಿ ದಾರಿಮಿ ಮಾತನಾಡಿ ಅಲ್ ಬಿರ್ರ್ ಶಾಲೆಯು ಮುಂದೆ ಬೃಹತ್ ಶಿಕ್ಷಣ ಸಂಸ್ಥೆಯಾಗಿ ಬೆಳೆಯುವುದರಲ್ಲಿ ಅನುಮಾನವಿಲ್ಲ. ಎಲ್ಲಾ ಕ್ಷೇತ್ರದಲ್ಲೂ ದೈನಂದಿನ ಬದಲಾವಣೆಗಳು ಆಗುತ್ತಿರುವಾಗ ಕಾಲದ ಕರೆಗೆ ಓಗೊಟ್ಟು ಮೂಲ ಧರ್ಮದ ಆಶಯಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಬದಲಾವಣೆಗಳನ್ನು ಅಳವಡಿಸಿಕೊಳ್ಳದಿದ್ದರೆ ಸಮುದಾಯ ಹಿಂದುಳಿಯ ಬೇಕಾಗುತ್ತದೆ ಎಂದರು.

ಸಯ್ಯಿದ್ ಅನಸ್ ತಂಙಳ್, ಕರ್ವೇಲು ಸಯ್ಯಿದ್, ಹಬೀಬುರ್ರಹ್ಮಾನ್ ತಙಳ್, ಇಸ್ಮಾಯಿಲ್ ತಙಳ್ ಉಪ್ಪಿನಂಗಡಿ ,
ಶಿಹಾಬುದ್ದೀನ್ ತಙಳ್, ಖಾಸಿಂ ಮದನಿ ಕರಾಯ, ಸಿದ್ದೀಕ್ ಫೈಝೀ, ಅಝೀಝ್ ಫೈಝೀ, ಯಾಕೂಬ್ ಫೈಝಿ, ಅಬ್ದುಲ್ ಜಬ್ಬಾರ್ ಅಸ್ಲಮಿ, ಇಲ್ಯಾಸ್ ಅರ್ಷದಿ ಆತೂರು, ಅಬ್ದುಲ್ ನಾಸಿರ್ ಅನ್ಸಾರಿ, ಇಲ್ಯಾಸ್ ದಾರಿಮಿ, ಅಶ್ರಫ್ ಹನೀಫಿ, ಜಬ್ಬಾರ್ ಅಶ್ಶಾಫಿ, ಸೇಕುಞಿ ಕಡಂಬಿಲ, ಮುಹಮ್ಮದ್ ಕೋಟ್ರಸ್, ಅಬ್ದುಲ್ಲಾ ಕೆ.ಎಂ, ಅಶ್ರಫ್ ಕೊಲ್ಲೆಜಾಲು, ಯು.ಟಿ ಫಯಾಜ್ ಉಪ್ಪಿನಂಗಡಿ, ಯೂಸುಫ್ ಹಾಜಿ ಫೆಧಮಲೆ, ಯಾಕೂಬ್ ಹುಸೈನ್ ಅಗ್ನಾಡಿ, ಕಾಸಿಂ ಕೊರಿಂಜ, ಶರೀಫ್ ಮಾಸ್ಟರ್, ಅಬ್ಬಾಸ್ ಹಾಜಿ ಮುರಿಯಾಲ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳ ಮೀಲಾದ್ ಪ್ರಯುಕ್ತ ನಡೆದ ಸ್ಪರ್ಧಾ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿ ನಪ್ಸೀರಾ ಹಾಗೂ ಸಹಶಿಕ್ಷಕಿ ಯರಾದ
ಫಾತಿಮಾ ಜಂಶೀರಾ, ಹಬೀಬಾ ಸುನೈನಾ, ಉಮ್ಮುಲ್ ಖೈರ್ ಆಮಿನಾ, ಮೈಮೂನಾ ಮಿಶ್ರಿಯಾ ಆಯಿಷಾ, ರಂಶೀನಾ, ನಡೆಸಿಕೊಟ್ಟರು.

ಮಹಮ್ಮದ್ ಅಶ್ರಫ್ ಉರುವಾಲುಪದವು ಅಧ್ಯಕ್ಷತೆ ವಹಿಸಿದ್ದರು . ಅಬ್ದುಲ್ ಶುಕೂರ್ ದಾರಿಮಿ ಸ್ವಾಗತಿಸಿದರು.

Related posts

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೃತ್ತಿ ಕೀಳರಿಮೆ ಬೇಡ, ಗೌರವವನ್ನು ಬೆಳೆಸಿಕೊಳ್ಳಿ : ಡಿ ಹರ್ಷೇಂದ್ರ ಕುಮಾರ್

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!