April 2, 2025
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಆ 9-15 ಬೆಳ್ತಂಗಡಿಯಲ್ಲಿ ಶ್ರೀಮದ್ ಭಾಗವತ ಪ್ರವಚನ ಸಪ್ತಾಹ,

Suddi Udaya

ಬೆಳ್ತಂಗಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಶಾಸಕರ ವಿರುದ್ಧ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

Suddi Udaya
error: Content is protected !!