September 6, 2026
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲ ಮೂಲ್ಕಿ ಇದರ ಬೆಳ್ಳಿಹಬ್ಬ ಸಂಭ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ವಿಮೆನ್ ಇಂಡಿಯಾ ಮೂವ್ಮೆಂಟ್ ನಿಯೋಗದಿಂದ ಬೆಳ್ತಂಗಡಿ ಡಿವೈಎಸ್‌ಪಿ ಭೇಟಿ

Suddi Udaya
error: Content is protected !!