25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಉಜಿರೆಯಲ್ಲಿ ನಾಟ್ಯ ತರಬೇತಿ ಪುನರಾರಂಭ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸದಸ್ಯ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!