25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

ಬೆಳ್ತಂಗಡಿ : ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ.
ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿದೆ.

ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ನದಿಯಲ್ಲಿ ಹರಿದು ಬಂದಿದೆ. ಮಂಗಳವಾರ ರಾತ್ರಿಯ ವೇಳೆ ಇದೇ ರೀತಿಯಲ್ಲಿ ನೆರಿಯ ಹೊಳೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು . ಇದೀಗ ಬುಧವಾರ ಮತ್ತೆ ಪ್ರವಾಹದಂತೆ ನದಿಯಲ್ಲಿ ನೀರು ಬಂದಿರುವುದು ಜನರಲ್ಲಿ ಭಯ ಮೂಡಿಸಿದೆ.

ಅಪರಾಹ್ನ ನೆರಿಯ ಪ್ರದೇಶದಲ್ಲಿ ಸಾಮಾನ್ಯ ಮಳೆ ಮಾತ್ರ ಸುರಿದಿದೆ. ಆದರೂ ನದಿಯಲ್ಲಿ ಹಾಗೂ ತೊರೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗಿದೆ.
ಚಾರ್ಮಾಡಿ ಘಾಟಿಯ ಮೇಲ್ಬಾಗದಿಂದ ಹರಿದು ಬಂದ ನೀರು ನೇರವಾಗಿ ನೆರಿಯ ಹಳ್ಳವನ್ನು ಸೇರುತ್ತಿದ್ದು ಘಾಟಿಯ ಮೇಲ್ಬಾಗದಲ್ಲಿ ಸುರಿದ ಮಳೆಯಿಂದಾಗಿ
ನೆರಿಯದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

Related posts

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya

ಪುತ್ತೂರು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಹಾಗೂ ಕಾಮ್‍ಸ್ಕೋಪ್ ಇವರ ಸಿಎಸ್ಆರ್ ನಿಧಿಯ ಪ್ರಾಯೋಜಕತ್ವದಲ್ಲಿ ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಿಂದ ಮುಂಡ್ರುಪ್ಪಾಡಿ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya
error: Content is protected !!