July 23, 2026
ಗ್ರಾಮಾಂತರ ಸುದ್ದಿ

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

ಬೆಳ್ತಂಗಡಿ : ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ.
ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿದೆ.

ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ನದಿಯಲ್ಲಿ ಹರಿದು ಬಂದಿದೆ. ಮಂಗಳವಾರ ರಾತ್ರಿಯ ವೇಳೆ ಇದೇ ರೀತಿಯಲ್ಲಿ ನೆರಿಯ ಹೊಳೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು . ಇದೀಗ ಬುಧವಾರ ಮತ್ತೆ ಪ್ರವಾಹದಂತೆ ನದಿಯಲ್ಲಿ ನೀರು ಬಂದಿರುವುದು ಜನರಲ್ಲಿ ಭಯ ಮೂಡಿಸಿದೆ.

ಅಪರಾಹ್ನ ನೆರಿಯ ಪ್ರದೇಶದಲ್ಲಿ ಸಾಮಾನ್ಯ ಮಳೆ ಮಾತ್ರ ಸುರಿದಿದೆ. ಆದರೂ ನದಿಯಲ್ಲಿ ಹಾಗೂ ತೊರೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗಿದೆ.
ಚಾರ್ಮಾಡಿ ಘಾಟಿಯ ಮೇಲ್ಬಾಗದಿಂದ ಹರಿದು ಬಂದ ನೀರು ನೇರವಾಗಿ ನೆರಿಯ ಹಳ್ಳವನ್ನು ಸೇರುತ್ತಿದ್ದು ಘಾಟಿಯ ಮೇಲ್ಬಾಗದಲ್ಲಿ ಸುರಿದ ಮಳೆಯಿಂದಾಗಿ
ನೆರಿಯದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

Related posts

ಪುಣ್ಯಕೋಟಿಯನ್ನು ಉಳಿಸಿ,ಕೋಟಿ ಕೋಟಿ ಪುಣ್ಯ ಗಳಿಸಿ, ಆ.26: ಉಜಿರೆಯಲ್ಲಿ “ಗೋವು ಉಳಿದರೆ ನಾವು” ಅಭಿಯಾನ-2026

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!