23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ (71 ವ) ರವರು ಅ.2ರಂದು ಮಧ್ಯಾಹ್ನ 12.00 ಗಂಟೆಗೆ ಗೇರುಕಟ್ಟೆ ಕೆನರಾ ಬ್ಯಾಂಕಿನ ATM ಕೇಂದ್ರದಲ್ಲಿ ಹಣ ಡ್ರಾ ಮಾಡುತಿದ್ದಾಗ ATM ಕೇಂದ್ರಕ್ಕೆ ಒಳ ಪ್ರವೇಶಿಸಿದ ಅಪರಿಚಿತ ಇಬ್ಬರು ವ್ಯಕ್ತಿಗಳು ಹಿಂದಿಯಲ್ಲಿ ಮಾತನ್ನಾಡಿ ಸಹಾಯಕ್ಕೆ ಬಂದಿದ್ದು, ಪಿರ್ಯಾದುದಾರರು ಸಹಾಯದ ಅಗತ್ಯ ಇಲ್ಲವೆಂದು ತಿಳಿಸಿದರೂ, ಅಪರಿಚಿತರು ಒಳಗಡೆಯೇ ನಿಂತಿದ್ದು, ನಂತರ ಪಿರ್ಯಾದುದಾರರು ಹಣ ತೆಗೆದು ATM ಕೇಂದ್ರದಿಂದ ATM ಕಾರ್ಡ್ ನೊಂದಿಗೆ ಹೊರಗಡೆ ಹೋಗಿದ್ದು, ನಂತರ ಅ.4ರಂದು ಅಳಿಯ ಹಾಗೂ ಮಗ ಹಾಕಿದ ಹಣವನ್ನು ಡ್ರಾ ಮಾಡಲು ATM ಕೇಂದ್ರಕ್ಕೆ ಹೋದಾಗ, ಕಾರ್ಡ್ ರೀಡ್ ಆಗದೇ ಇದ್ದು, ನಂತರ ಪಿರ್ಯಾದುದಾರರು ಬ್ಯಾಂಕ್ ಗೆ ಹೋಗಿ ವಿಚಾರಿಸಲಾಗಿ ATM ಕಾರ್ಡ್ ಬದಲಾದ ಬಗ್ಗೆ ತಿಳಿಸಿದ್ದು, ಖಾತೆಯಲ್ಲಿನ ಬ್ಯಾಲೆನ್ಸ್ ಚೆಕ್ ಮಾಡಲಾಗಿ ಖಾತೆಯಲ್ಲಿದ್ದ ರೂ. 49,200/- ಹಣವನ್ನು ವಂಚಿಸಿ ತನ್ನ ATM ಕಾರ್ಡ್ ಬಳಸಿ, ಆ ದಿನ ATM ಕೇಂದ್ರದಲ್ಲಿದ್ದ ಅಪರಿಚಿತ ಇಬ್ಬರು ವ್ಯಕ್ತಿಗಳು ಬೇರೆ ಬೇರೆ ATM ಕೇಂದ್ರದಲ್ಲಿ ತೆಗೆದು ಕಳವು ಮಾಡಿದ್ದು, ಈ ಬಗ್ಗೆ ವಂಚಿಸಿ ಕಳವು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅ.9ರಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ : 86/2024, ಕಲಂ: 316(2), 318(4) BNS – 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆ ಮಾಡಲು ಸಹಕರಿಸಿ ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. 08256 – 232093

Related posts

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಒತ್ತಾಯ: ಸೆ.3: ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘ, ಯುವ ವಕೀಲರ ವೇದಿಕೆಯ ವತಿಯಿಂದ ಕ್ರಿಸ್ ಮಸ್ ಆಚರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಜೆಸಿಐ ಮಂಜುಶ್ರೀ ಮಹಿಳಾ ವಿಭಾಗದಿಂದ ಮೆಡಿಕಲ್ ಕ್ಯಾಂಪ್

Suddi Udaya

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!