September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ (71 ವ) ರವರು ಅ.2ರಂದು ಮಧ್ಯಾಹ್ನ 12.00 ಗಂಟೆಗೆ ಗೇರುಕಟ್ಟೆ ಕೆನರಾ ಬ್ಯಾಂಕಿನ ATM ಕೇಂದ್ರದಲ್ಲಿ ಹಣ ಡ್ರಾ ಮಾಡುತಿದ್ದಾಗ ATM ಕೇಂದ್ರಕ್ಕೆ ಒಳ ಪ್ರವೇಶಿಸಿದ ಅಪರಿಚಿತ ಇಬ್ಬರು ವ್ಯಕ್ತಿಗಳು ಹಿಂದಿಯಲ್ಲಿ ಮಾತನ್ನಾಡಿ ಸಹಾಯಕ್ಕೆ ಬಂದಿದ್ದು, ಪಿರ್ಯಾದುದಾರರು ಸಹಾಯದ ಅಗತ್ಯ ಇಲ್ಲವೆಂದು ತಿಳಿಸಿದರೂ, ಅಪರಿಚಿತರು ಒಳಗಡೆಯೇ ನಿಂತಿದ್ದು, ನಂತರ ಪಿರ್ಯಾದುದಾರರು ಹಣ ತೆಗೆದು ATM ಕೇಂದ್ರದಿಂದ ATM ಕಾರ್ಡ್ ನೊಂದಿಗೆ ಹೊರಗಡೆ ಹೋಗಿದ್ದು, ನಂತರ ಅ.4ರಂದು ಅಳಿಯ ಹಾಗೂ ಮಗ ಹಾಕಿದ ಹಣವನ್ನು ಡ್ರಾ ಮಾಡಲು ATM ಕೇಂದ್ರಕ್ಕೆ ಹೋದಾಗ, ಕಾರ್ಡ್ ರೀಡ್ ಆಗದೇ ಇದ್ದು, ನಂತರ ಪಿರ್ಯಾದುದಾರರು ಬ್ಯಾಂಕ್ ಗೆ ಹೋಗಿ ವಿಚಾರಿಸಲಾಗಿ ATM ಕಾರ್ಡ್ ಬದಲಾದ ಬಗ್ಗೆ ತಿಳಿಸಿದ್ದು, ಖಾತೆಯಲ್ಲಿನ ಬ್ಯಾಲೆನ್ಸ್ ಚೆಕ್ ಮಾಡಲಾಗಿ ಖಾತೆಯಲ್ಲಿದ್ದ ರೂ. 49,200/- ಹಣವನ್ನು ವಂಚಿಸಿ ತನ್ನ ATM ಕಾರ್ಡ್ ಬಳಸಿ, ಆ ದಿನ ATM ಕೇಂದ್ರದಲ್ಲಿದ್ದ ಅಪರಿಚಿತ ಇಬ್ಬರು ವ್ಯಕ್ತಿಗಳು ಬೇರೆ ಬೇರೆ ATM ಕೇಂದ್ರದಲ್ಲಿ ತೆಗೆದು ಕಳವು ಮಾಡಿದ್ದು, ಈ ಬಗ್ಗೆ ವಂಚಿಸಿ ಕಳವು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅ.9ರಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ : 86/2024, ಕಲಂ: 316(2), 318(4) BNS – 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆ ಮಾಡಲು ಸಹಕರಿಸಿ ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. 08256 – 232093

Related posts

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿರ್ಲಾಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya
error: Content is protected !!