22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ (71 ವ) ರವರು ಅ.2ರಂದು ಮಧ್ಯಾಹ್ನ 12.00 ಗಂಟೆಗೆ ಗೇರುಕಟ್ಟೆ ಕೆನರಾ ಬ್ಯಾಂಕಿನ ATM ಕೇಂದ್ರದಲ್ಲಿ ಹಣ ಡ್ರಾ ಮಾಡುತಿದ್ದಾಗ ATM ಕೇಂದ್ರಕ್ಕೆ ಒಳ ಪ್ರವೇಶಿಸಿದ ಅಪರಿಚಿತ ಇಬ್ಬರು ವ್ಯಕ್ತಿಗಳು ಹಿಂದಿಯಲ್ಲಿ ಮಾತನ್ನಾಡಿ ಸಹಾಯಕ್ಕೆ ಬಂದಿದ್ದು, ಪಿರ್ಯಾದುದಾರರು ಸಹಾಯದ ಅಗತ್ಯ ಇಲ್ಲವೆಂದು ತಿಳಿಸಿದರೂ, ಅಪರಿಚಿತರು ಒಳಗಡೆಯೇ ನಿಂತಿದ್ದು, ನಂತರ ಪಿರ್ಯಾದುದಾರರು ಹಣ ತೆಗೆದು ATM ಕೇಂದ್ರದಿಂದ ATM ಕಾರ್ಡ್ ನೊಂದಿಗೆ ಹೊರಗಡೆ ಹೋಗಿದ್ದು, ನಂತರ ಅ.4ರಂದು ಅಳಿಯ ಹಾಗೂ ಮಗ ಹಾಕಿದ ಹಣವನ್ನು ಡ್ರಾ ಮಾಡಲು ATM ಕೇಂದ್ರಕ್ಕೆ ಹೋದಾಗ, ಕಾರ್ಡ್ ರೀಡ್ ಆಗದೇ ಇದ್ದು, ನಂತರ ಪಿರ್ಯಾದುದಾರರು ಬ್ಯಾಂಕ್ ಗೆ ಹೋಗಿ ವಿಚಾರಿಸಲಾಗಿ ATM ಕಾರ್ಡ್ ಬದಲಾದ ಬಗ್ಗೆ ತಿಳಿಸಿದ್ದು, ಖಾತೆಯಲ್ಲಿನ ಬ್ಯಾಲೆನ್ಸ್ ಚೆಕ್ ಮಾಡಲಾಗಿ ಖಾತೆಯಲ್ಲಿದ್ದ ರೂ. 49,200/- ಹಣವನ್ನು ವಂಚಿಸಿ ತನ್ನ ATM ಕಾರ್ಡ್ ಬಳಸಿ, ಆ ದಿನ ATM ಕೇಂದ್ರದಲ್ಲಿದ್ದ ಅಪರಿಚಿತ ಇಬ್ಬರು ವ್ಯಕ್ತಿಗಳು ಬೇರೆ ಬೇರೆ ATM ಕೇಂದ್ರದಲ್ಲಿ ತೆಗೆದು ಕಳವು ಮಾಡಿದ್ದು, ಈ ಬಗ್ಗೆ ವಂಚಿಸಿ ಕಳವು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅ.9ರಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ : 86/2024, ಕಲಂ: 316(2), 318(4) BNS – 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆ ಮಾಡಲು ಸಹಕರಿಸಿ ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. 08256 – 232093

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಬಳಂಜ: ತಾಯಿ-ಮಗನಿಗೆ ಜೀವ ಬೆದರಿಕೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya
error: Content is protected !!