24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ (71 ವ) ರವರು ಅ.2ರಂದು ಮಧ್ಯಾಹ್ನ 12.00 ಗಂಟೆಗೆ ಗೇರುಕಟ್ಟೆ ಕೆನರಾ ಬ್ಯಾಂಕಿನ ATM ಕೇಂದ್ರದಲ್ಲಿ ಹಣ ಡ್ರಾ ಮಾಡುತಿದ್ದಾಗ ATM ಕೇಂದ್ರಕ್ಕೆ ಒಳ ಪ್ರವೇಶಿಸಿದ ಅಪರಿಚಿತ ಇಬ್ಬರು ವ್ಯಕ್ತಿಗಳು ಹಿಂದಿಯಲ್ಲಿ ಮಾತನ್ನಾಡಿ ಸಹಾಯಕ್ಕೆ ಬಂದಿದ್ದು, ಪಿರ್ಯಾದುದಾರರು ಸಹಾಯದ ಅಗತ್ಯ ಇಲ್ಲವೆಂದು ತಿಳಿಸಿದರೂ, ಅಪರಿಚಿತರು ಒಳಗಡೆಯೇ ನಿಂತಿದ್ದು, ನಂತರ ಪಿರ್ಯಾದುದಾರರು ಹಣ ತೆಗೆದು ATM ಕೇಂದ್ರದಿಂದ ATM ಕಾರ್ಡ್ ನೊಂದಿಗೆ ಹೊರಗಡೆ ಹೋಗಿದ್ದು, ನಂತರ ಅ.4ರಂದು ಅಳಿಯ ಹಾಗೂ ಮಗ ಹಾಕಿದ ಹಣವನ್ನು ಡ್ರಾ ಮಾಡಲು ATM ಕೇಂದ್ರಕ್ಕೆ ಹೋದಾಗ, ಕಾರ್ಡ್ ರೀಡ್ ಆಗದೇ ಇದ್ದು, ನಂತರ ಪಿರ್ಯಾದುದಾರರು ಬ್ಯಾಂಕ್ ಗೆ ಹೋಗಿ ವಿಚಾರಿಸಲಾಗಿ ATM ಕಾರ್ಡ್ ಬದಲಾದ ಬಗ್ಗೆ ತಿಳಿಸಿದ್ದು, ಖಾತೆಯಲ್ಲಿನ ಬ್ಯಾಲೆನ್ಸ್ ಚೆಕ್ ಮಾಡಲಾಗಿ ಖಾತೆಯಲ್ಲಿದ್ದ ರೂ. 49,200/- ಹಣವನ್ನು ವಂಚಿಸಿ ತನ್ನ ATM ಕಾರ್ಡ್ ಬಳಸಿ, ಆ ದಿನ ATM ಕೇಂದ್ರದಲ್ಲಿದ್ದ ಅಪರಿಚಿತ ಇಬ್ಬರು ವ್ಯಕ್ತಿಗಳು ಬೇರೆ ಬೇರೆ ATM ಕೇಂದ್ರದಲ್ಲಿ ತೆಗೆದು ಕಳವು ಮಾಡಿದ್ದು, ಈ ಬಗ್ಗೆ ವಂಚಿಸಿ ಕಳವು ಮಾಡಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅ.9ರಂದು ನೀಡಿದ ದೂರಿನ ಆಧಾರದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ : 86/2024, ಕಲಂ: 316(2), 318(4) BNS – 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಭಾವಚಿತ್ರದಲ್ಲಿರುವ ಅಪರಿಚಿತ ವ್ಯಕ್ತಿಗಳನ್ನು ಪತ್ತೆ ಮಾಡಲು ಸಹಕರಿಸಿ ಪತ್ತೆಯಾದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. 08256 – 232093

Related posts

ನಡ: ಆಟ ಆಡುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮಹಾಸಭೆ: ನೂತನ ಅಧ್ಯಕ್ಷರಾಗಿ ದಿನೇಶ್ ಕೆ. ಕೊಕ್ಕಡ ಆಯ್ಕೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಸವಣಾಲು ಶ್ರೀ ದುರ್ಗಾ ಕಾಳಿಕಾಂಬ ದೇವಸ್ಥಾನದ ಅರ್ಚಕ ವಿಜಯ ಭಟ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!