25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ.

ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ.

2019ರಲ್ಲಿ ಪ್ರವಾಹ ಬಂದ ನಂತರ, ಅಂತರ್ಜಲ ಅಭಿವೃದ್ದಿ ಮತ್ತು ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು, ಕಿಂಡಿ ಅಣೆಕಟ್ಟು ಸ್ಥಳೀಯ ತೋಟದ ಮಟ್ಟಕ್ಕೆ ಸಮವಾಗಿರುವ ಕಾರಣ ಪ್ರವಾಹದಲ್ಲಿ ಕೊಚ್ಚಿ ಬಂದ ಮರದ ದಿಮ್ಮಿಗಳು ಕಿಂಡಿ ಅಣೆಕಟ್ಟಿನಲ್ಲಿ ನಿಂತು ನೀರು ತೋಟಗಳಿಗೆ ನುಗ್ಗುತ್ತಿದೆ.

ಅಸಮರ್ಪಕವಾದ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಸ್ಥಳೀಯ ನಾಯಕರುಗಳು ತಡೆಗೋಡೆ ಕಟ್ಟಿಸಿ ಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದು ಇದುವರೆಗೂ ಆ ಕೆಲಸವಾಗಿಲ್ಲ. ಪಂಚಾಯತ್‌ನವರಿಗೆ ಕರೆ ಮಾಡಿ ತಿಳಿಸಿದರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Related posts

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!