25.5 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ.

ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ.

2019ರಲ್ಲಿ ಪ್ರವಾಹ ಬಂದ ನಂತರ, ಅಂತರ್ಜಲ ಅಭಿವೃದ್ದಿ ಮತ್ತು ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು, ಕಿಂಡಿ ಅಣೆಕಟ್ಟು ಸ್ಥಳೀಯ ತೋಟದ ಮಟ್ಟಕ್ಕೆ ಸಮವಾಗಿರುವ ಕಾರಣ ಪ್ರವಾಹದಲ್ಲಿ ಕೊಚ್ಚಿ ಬಂದ ಮರದ ದಿಮ್ಮಿಗಳು ಕಿಂಡಿ ಅಣೆಕಟ್ಟಿನಲ್ಲಿ ನಿಂತು ನೀರು ತೋಟಗಳಿಗೆ ನುಗ್ಗುತ್ತಿದೆ.

ಅಸಮರ್ಪಕವಾದ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಸ್ಥಳೀಯ ನಾಯಕರುಗಳು ತಡೆಗೋಡೆ ಕಟ್ಟಿಸಿ ಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದು ಇದುವರೆಗೂ ಆ ಕೆಲಸವಾಗಿಲ್ಲ. ಪಂಚಾಯತ್‌ನವರಿಗೆ ಕರೆ ಮಾಡಿ ತಿಳಿಸಿದರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Related posts

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ: ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ,ಶೈಕ್ಷಣಿಕ ಕ್ಷೇತ್ರದ ಯುವ ಸಾಧಕ ಸುಮಂತ್ ಕುಮಾರ್‌ ಜೈನ್ ಅವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

Suddi Udaya

ನಿನ್ನೆ ಸುರಿದ ಅನಿರೀಕ್ಷಿತ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಕಂಡುಬಂದ ಹಲವೆಡೆ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಹರೀಶ್ ಪೂಂಜಾ ಭೇಟಿ

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಧರ್ಮಸ್ಥಳ ಪೋಸೋಲಿಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!