25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ.

ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ.

2019ರಲ್ಲಿ ಪ್ರವಾಹ ಬಂದ ನಂತರ, ಅಂತರ್ಜಲ ಅಭಿವೃದ್ದಿ ಮತ್ತು ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು, ಕಿಂಡಿ ಅಣೆಕಟ್ಟು ಸ್ಥಳೀಯ ತೋಟದ ಮಟ್ಟಕ್ಕೆ ಸಮವಾಗಿರುವ ಕಾರಣ ಪ್ರವಾಹದಲ್ಲಿ ಕೊಚ್ಚಿ ಬಂದ ಮರದ ದಿಮ್ಮಿಗಳು ಕಿಂಡಿ ಅಣೆಕಟ್ಟಿನಲ್ಲಿ ನಿಂತು ನೀರು ತೋಟಗಳಿಗೆ ನುಗ್ಗುತ್ತಿದೆ.

ಅಸಮರ್ಪಕವಾದ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಸ್ಥಳೀಯ ನಾಯಕರುಗಳು ತಡೆಗೋಡೆ ಕಟ್ಟಿಸಿ ಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದು ಇದುವರೆಗೂ ಆ ಕೆಲಸವಾಗಿಲ್ಲ. ಪಂಚಾಯತ್‌ನವರಿಗೆ ಕರೆ ಮಾಡಿ ತಿಳಿಸಿದರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Related posts

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya
error: Content is protected !!