22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಯ ಅಲ್ ಬಿರ್ರ್ ಸ್ಕೂಲಿನಲ್ಲಿ ಇಶ್ಕೇ ರಸೂಲ್ ಮೀಲಾದ್ ಕಾರ್ಯಕ್ರಮ: ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ

ಉಪ್ಪಿನಂಗಡಿ: ಇಲ್ಲಿಯ ಸಮೀಪದ ಕರಾಯದಲ್ಲಿ ಮತ ಬೌತಿಕ ಸಮನ್ವಯ ಶಿಕ್ಷಣ ಸಂಸ್ಥೆಯಾದ ಪ್ರತಿಷ್ಠಿತ ಅಲ್ ಬರ್ರ್ ಶಾಲೆಯಲ್ಲಿ ಮೀಲಾದ್ ಪ್ರಯುಕ್ತ ಇಶ್ಕೇ ರಸೂಲ್ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಂದ ಆಕರ್ಷಕ ಕಲಾ ಪ್ರದರ್ಶನ, ವಿವಿಧ ರೀತಿಯ ಸ್ಪರ್ಧೆ ಗಳು, ಪ್ಲವರ್ ಶೋ, ಮೌಲಿದ್ ಮಜ್ಲಿಸ್ ನಡೆಯಿತು.

ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಹಬೀಬು ರ್ರಹ್ಮಾನ್ ತಂಙಳ್ ಕಲ್ಲೇರಿ ದುಹಾ ಮೂಲಕ ನೆರವೇರಿಸಿದರು.

ಮುಖ್ಯ ಭಾಷಣಗೈದ ಎಸ್ ಬಿ ದಾರಿಮಿ ಮಾತನಾಡಿ ಅಲ್ ಬಿರ್ರ್ ಶಾಲೆಯು ಮುಂದೆ ಬೃಹತ್ ಶಿಕ್ಷಣ ಸಂಸ್ಥೆಯಾಗಿ ಬೆಳೆಯುವುದರಲ್ಲಿ ಅನುಮಾನವಿಲ್ಲ. ಎಲ್ಲಾ ಕ್ಷೇತ್ರದಲ್ಲೂ ದೈನಂದಿನ ಬದಲಾವಣೆಗಳು ಆಗುತ್ತಿರುವಾಗ ಕಾಲದ ಕರೆಗೆ ಓಗೊಟ್ಟು ಮೂಲ ಧರ್ಮದ ಆಶಯಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಬದಲಾವಣೆಗಳನ್ನು ಅಳವಡಿಸಿಕೊಳ್ಳದಿದ್ದರೆ ಸಮುದಾಯ ಹಿಂದುಳಿಯ ಬೇಕಾಗುತ್ತದೆ ಎಂದರು.

ಸಯ್ಯಿದ್ ಅನಸ್ ತಂಙಳ್, ಕರ್ವೇಲು ಸಯ್ಯಿದ್, ಹಬೀಬುರ್ರಹ್ಮಾನ್ ತಙಳ್, ಇಸ್ಮಾಯಿಲ್ ತಙಳ್ ಉಪ್ಪಿನಂಗಡಿ ,
ಶಿಹಾಬುದ್ದೀನ್ ತಙಳ್, ಖಾಸಿಂ ಮದನಿ ಕರಾಯ, ಸಿದ್ದೀಕ್ ಫೈಝೀ, ಅಝೀಝ್ ಫೈಝೀ, ಯಾಕೂಬ್ ಫೈಝಿ, ಅಬ್ದುಲ್ ಜಬ್ಬಾರ್ ಅಸ್ಲಮಿ, ಇಲ್ಯಾಸ್ ಅರ್ಷದಿ ಆತೂರು, ಅಬ್ದುಲ್ ನಾಸಿರ್ ಅನ್ಸಾರಿ, ಇಲ್ಯಾಸ್ ದಾರಿಮಿ, ಅಶ್ರಫ್ ಹನೀಫಿ, ಜಬ್ಬಾರ್ ಅಶ್ಶಾಫಿ, ಸೇಕುಞಿ ಕಡಂಬಿಲ, ಮುಹಮ್ಮದ್ ಕೋಟ್ರಸ್, ಅಬ್ದುಲ್ಲಾ ಕೆ.ಎಂ, ಅಶ್ರಫ್ ಕೊಲ್ಲೆಜಾಲು, ಯು.ಟಿ ಫಯಾಜ್ ಉಪ್ಪಿನಂಗಡಿ, ಯೂಸುಫ್ ಹಾಜಿ ಫೆಧಮಲೆ, ಯಾಕೂಬ್ ಹುಸೈನ್ ಅಗ್ನಾಡಿ, ಕಾಸಿಂ ಕೊರಿಂಜ, ಶರೀಫ್ ಮಾಸ್ಟರ್, ಅಬ್ಬಾಸ್ ಹಾಜಿ ಮುರಿಯಾಲ, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ವಿದ್ಯಾರ್ಥಿಗಳ ಮೀಲಾದ್ ಪ್ರಯುಕ್ತ ನಡೆದ ಸ್ಪರ್ಧಾ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿ ನಪ್ಸೀರಾ ಹಾಗೂ ಸಹಶಿಕ್ಷಕಿ ಯರಾದ
ಫಾತಿಮಾ ಜಂಶೀರಾ, ಹಬೀಬಾ ಸುನೈನಾ, ಉಮ್ಮುಲ್ ಖೈರ್ ಆಮಿನಾ, ಮೈಮೂನಾ ಮಿಶ್ರಿಯಾ ಆಯಿಷಾ, ರಂಶೀನಾ, ನಡೆಸಿಕೊಟ್ಟರು.

ಮಹಮ್ಮದ್ ಅಶ್ರಫ್ ಉರುವಾಲುಪದವು ಅಧ್ಯಕ್ಷತೆ ವಹಿಸಿದ್ದರು . ಅಬ್ದುಲ್ ಶುಕೂರ್ ದಾರಿಮಿ ಸ್ವಾಗತಿಸಿದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಗಣೇಶೋತ್ಸವ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಶಿರ್ಲಾಲು ನಿವಾಸಿ ಜಯಂತಿ ಹೃದಯಾಘಾತದಿಂದ ನಿಧನ

Suddi Udaya

ಎಸ್ ವಿ ಟಿ ಟೀಮ್ ಪಟ್ರಮೆ ವತಿಯಿಂದ ದೀಪಾವಳಿ ಪ್ರಯುಕ್ತ ವಾಲಿಬಾಲ್ ಪಂದ್ಯಾಟ

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya
error: Content is protected !!