September 6, 2026
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯಾಧ್ಯಕ್ಷರಾಗಿ ಡಾ. ರವಿ ಮಂಡ್ಯ ಆಯ್ಕೆ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಸೆ.3: ಬೈಂದೂರಿನಲ್ಲಿ ಶ್ರೀರಾಮ ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 18ನೇ ವರ್ಧಂತ್ಯುತ್ಸವ

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya
error: Content is protected !!