23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya

ಭಾರತೀಯ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ (ಐಎನ್‌ಎಸ್‌ಇಎಫ್) 2024-25″ – ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯ ಅಧೀಶ್ ಬಿ.ಸಿ ಮತ್ತು ಆಲಾಪ್.ಎಂ ಗೆ ಚಿನ್ನದ ಪದಕ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ.

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಸೋಮಂತಡ್ಕ ಬಳಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಯುವ ಪೋಟೋಗ್ರಾಫರ್ ಗಣೇಶ್ ಗೌಡ ಕಳೆಂಜ ಸಾವು

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!