22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

ಚಾರ್ಮಾಡಿ ಘಾಟಿ ಪರಿಸರದಲ್ಲಿ ಬುಧವಾರ ಮಧ್ಯಾಹ್ನದ ಬಳಿಕ ಭಾರಿ ಗಾಳಿ,ಮಳೆ ಸುರಿದಿದ್ದು, ಘಾಟಿಯ ಮೂರನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿ ಬಿದ್ದಿವೆ.
ಮರಗಳು ಉರುಳಿ ಬೀಳುವ ವೇಳೆ ಲಘು ಪ್ರಮಾಣದ ಗುಡ್ಡ ಕುಸಿತವು ಉಂಟಾಗಿದೆ. ಮರಗಳು ರಸ್ತೆಗೆ ಬಿದ್ದ ಪ್ರದೇಶದಲ್ಲಿ ಒಂದು ವಾಹನ ಮಾತ್ರ ಸಂಚರಿಸುವಷ್ಟು ಜಾಗ ಇದ್ದು ಬೇಕಾಬಿಟ್ಟಿ ವಾಹನಗಳನ್ನು ನುಗ್ಗಿಸಿದ ಕಾರಣ ಟ್ರಾಫಿಕ್ ಜಾಮ್ ಸಮಸ್ಯೆ ತಲೆದೋರಿತು.


ಘಾಟಿ ಪ್ರದೇಶದಲ್ಲಿ ನಿರಂತರ ಎರಡು ತಾಸಿಗಿಂತ ಅಧಿಕಕಾಲ ಮಳೆ ಸುರಿದ ಕಾರಣ ಘಾಟಿ ರಸ್ತೆ ನದಿಯಂತಾಗಿತ್ತು.ಘಾಟಿ ಪ್ರದೇಶದಲ್ಲಿರುವ ಹಲವಾರು ಜಲಪಾತಗಳು ರಸ್ತೆ ತನಕವು ಧುಮ್ಮಿಕ್ಕಿದ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಜಲಪಾತಗಳಿಂದ ರಸ್ತೆಗೆ ಬಿದ್ದ ನೀರು ಚರಂಡಿ ಇಲ್ಲದ ಕಾರಣ ರಸ್ತೆಯಲ್ಲಿ ಹಳ್ಳದಂತೆ ಹರಿಯಿತು.

ಗುಡ್ಡ ಕುಸಿತ ಹಾಗೂ ಮರ ಉರುಳಿರುವ ಕುರಿತು ಸ್ಥಳೀಯರಾದ ಚಾರ್ಮಾಡಿ ಹಸನಬ್ಬ ಹಾಗು ಇತರರು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಜೆಸಿಬಿ ಮೂಲಕ ಮರ ತೆರವುಗೊಳಿಸಿ ಸುಗಮ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.

Related posts

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪ್ರಯೋಗಾಲಯ ಉಪಕರಣಗಳ ಹಸ್ತಾಂತರ ಮತ್ತು ಪ್ರತಿಭಾ ಪುರಸ್ಕಾರ

Suddi Udaya

ನೆರಿಯ ಗ್ರಾಮ ಸಭೆ: ಜನವಸತಿಯಿರುವ ಪ್ರದೇಶಕ್ಕೆ ದಾರಿದೀಪ ವಿಸ್ತರಣೆಗೆ ಗ್ರಾಮಸ್ಥರ ಒತ್ತಾಯ

Suddi Udaya

ಸೆ.26-27: ಬೆಳ್ತಂಗಡಿಯಲ್ಲಿ ಊದು ಪೂಜೆ ಮತ್ತು ಬೋಳ್ತೆರ್ದ ಪಿಲಿಕುಲೆನ ಅಬ್ಬರದ ನಲಿಕೆ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ಗುರುವಂದನೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ: ಬಿನುತಾ ಬಂಗೇರರವರ ಸಾರಥ್ಯದಲ್ಲಿ,ಬಂಗೇರ ಬ್ರಿಗೇಡ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ

Suddi Udaya

ಮಿನಿ ವಿಮಾನ ನಿಲ್ದಾಣ: ಧರ್ಮಸ್ಥಳ ನೀರಚಿಲುಮೆ ಬಳಿ ಜಾಗ ಪರಿಶೀಲನೆ ನಡೆಸಿದ ಅಧಿಕಾರಿಗಳು

Suddi Udaya
error: Content is protected !!