July 23, 2026
ಗ್ರಾಮಾಂತರ ಸುದ್ದಿ

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

ಬೆಳ್ತಂಗಡಿ : ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ.
ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿದೆ.

ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ನದಿಯಲ್ಲಿ ಹರಿದು ಬಂದಿದೆ. ಮಂಗಳವಾರ ರಾತ್ರಿಯ ವೇಳೆ ಇದೇ ರೀತಿಯಲ್ಲಿ ನೆರಿಯ ಹೊಳೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು . ಇದೀಗ ಬುಧವಾರ ಮತ್ತೆ ಪ್ರವಾಹದಂತೆ ನದಿಯಲ್ಲಿ ನೀರು ಬಂದಿರುವುದು ಜನರಲ್ಲಿ ಭಯ ಮೂಡಿಸಿದೆ.

ಅಪರಾಹ್ನ ನೆರಿಯ ಪ್ರದೇಶದಲ್ಲಿ ಸಾಮಾನ್ಯ ಮಳೆ ಮಾತ್ರ ಸುರಿದಿದೆ. ಆದರೂ ನದಿಯಲ್ಲಿ ಹಾಗೂ ತೊರೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗಿದೆ.
ಚಾರ್ಮಾಡಿ ಘಾಟಿಯ ಮೇಲ್ಬಾಗದಿಂದ ಹರಿದು ಬಂದ ನೀರು ನೇರವಾಗಿ ನೆರಿಯ ಹಳ್ಳವನ್ನು ಸೇರುತ್ತಿದ್ದು ಘಾಟಿಯ ಮೇಲ್ಬಾಗದಲ್ಲಿ ಸುರಿದ ಮಳೆಯಿಂದಾಗಿ
ನೆರಿಯದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅನ್ವಿತ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!