ಗ್ರಾಮಾಂತರ ಸುದ್ದಿ

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

ಬೆಳ್ತಂಗಡಿ : ನೆರಿಯ ಪ್ರದೇಶದಲ್ಲಿ ಬುಧವಾರ ಅಪರಾಹ್ನ ಭಾರೀ ಮಳೆ ಸುರಿದಿದ್ದು ನೆರಿಯ ಸೇತುವೆ ಮತ್ತೆ ಮುಳುಗಡೆಯಾಗಿದ್ದು ಜನರು ಆತಂಕದಲ್ಲಿದ್ದಾರೆ.
ನೆರಿಯ ಗ್ರಾಮದ ಕಾಟಾಜೆ, ಪುಲ್ಲಾಜೆ ಪರಿಸರದಲ್ಲಿ ಭಾರೀ ನೀರು ಹರಿದು ಬಂದಿದ್ದು ತೋಟಗಳು ಗದ್ದೆಗಳು ಜಲಾವೃತಗೊಂಡಿದೆ.

ಭಾರೀ ಪ್ರಮಾಣದಲ್ಲಿ ಕೆಸರು ಮಿಶ್ರಿತ ನೀರು ನದಿಯಲ್ಲಿ ಹರಿದು ಬಂದಿದೆ. ಮಂಗಳವಾರ ರಾತ್ರಿಯ ವೇಳೆ ಇದೇ ರೀತಿಯಲ್ಲಿ ನೆರಿಯ ಹೊಳೆಯಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು . ಇದೀಗ ಬುಧವಾರ ಮತ್ತೆ ಪ್ರವಾಹದಂತೆ ನದಿಯಲ್ಲಿ ನೀರು ಬಂದಿರುವುದು ಜನರಲ್ಲಿ ಭಯ ಮೂಡಿಸಿದೆ.

ಅಪರಾಹ್ನ ನೆರಿಯ ಪ್ರದೇಶದಲ್ಲಿ ಸಾಮಾನ್ಯ ಮಳೆ ಮಾತ್ರ ಸುರಿದಿದೆ. ಆದರೂ ನದಿಯಲ್ಲಿ ಹಾಗೂ ತೊರೆಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗಿದೆ.
ಚಾರ್ಮಾಡಿ ಘಾಟಿಯ ಮೇಲ್ಬಾಗದಿಂದ ಹರಿದು ಬಂದ ನೀರು ನೇರವಾಗಿ ನೆರಿಯ ಹಳ್ಳವನ್ನು ಸೇರುತ್ತಿದ್ದು ಘಾಟಿಯ ಮೇಲ್ಬಾಗದಲ್ಲಿ ಸುರಿದ ಮಳೆಯಿಂದಾಗಿ
ನೆರಿಯದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.

Related posts

ವೇಣೂರು ಎಸ್.ಡಿ.ಎಂ ಐಟಿಐ ಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಉಮೇಶ್ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!