22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಗುರಿಪಳ್ಳ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತನ್ನ ಸಾಂತ್ವನ ನಿಧಿಯಿಂದ ಒಟ್ಟುಗೂಡಿಸಿದ ಸಹಾಯಧನದ ಮೊತ್ತವನ್ನು ಇತ್ತೀಚೆಗೆ ಸುರಿದ ಭಾರಿ ಮಳೆಗೆ ತನ್ನ ಮನೆಯ ಒಂದು ಪಾರ್ಶ್ವ ಸಂಪೂರ್ಣ ಬಿರುಕುಗೊಂಡು ಮನೆ ಸಂಪೂರ್ಣ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಹೆಬ್ಬಾರ್ ದೊಡಿ ನಿವಾಸಿ ನೋಣಯ್ಯ ಪೂಜಾರಿ ಇವರ ಕುಟುಂಬಕ್ಕೆ ಹತ್ತು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸುವ ಮೂಲಕ ವಿತರಿಸಲಾಯಿತು.

ನೋಣಯ್ಯ ಪೂಜಾರಿಯವರ ಪತ್ನಿ ಶ್ರೀಮತಿ ಬೇಬಿ ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರಿಂದ ಚೆಕ್ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರಾದ ಗುರುರಾಜ್ ಗುರಿಪಳ್ಳ, ಜಯ ಕುಮಾರ್ ನಡ, ಚಂದ್ರಶೇಖರ್ ಇಂದಬೆಟ್ಟು, ಗ್ರಾಮ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್, ಯುವವಾಹಿನಿ ಸಂಚಾಲನ ಸಮಿತಿ ಗುರಿಪಳ್ಳ ಅಧ್ಯಕ್ಷ ಜಯರಾಮ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಶ್ರೀಮತಿ ದೇವಕಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಮುಹಿಯುದ್ದೀನ್ ಜುಮಾ ಮಸೀದಿ, ಎಸ್.ಕೆ.ಎಸ್.ಎಸ್.ಎಫ್. ಕಕ್ಕಿಂಜೆ ಯೂನಿಟ್ ಇದರ ಆಶ್ರಯದಲ್ಲಿ 3ನೇ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya
error: Content is protected !!