23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

ಗುರಿಪಳ್ಳ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ತನ್ನ ಸಾಂತ್ವನ ನಿಧಿಯಿಂದ ಒಟ್ಟುಗೂಡಿಸಿದ ಸಹಾಯಧನದ ಮೊತ್ತವನ್ನು ಇತ್ತೀಚೆಗೆ ಸುರಿದ ಭಾರಿ ಮಳೆಗೆ ತನ್ನ ಮನೆಯ ಒಂದು ಪಾರ್ಶ್ವ ಸಂಪೂರ್ಣ ಬಿರುಕುಗೊಂಡು ಮನೆ ಸಂಪೂರ್ಣ ಕುಸಿಯುವ ಭೀತಿಯಲ್ಲಿರುವ ಗುರಿಪಳ್ಳದ ಹೆಬ್ಬಾರ್ ದೊಡಿ ನಿವಾಸಿ ನೋಣಯ್ಯ ಪೂಜಾರಿ ಇವರ ಕುಟುಂಬಕ್ಕೆ ಹತ್ತು ಸಾವಿರ ಮೊತ್ತದ ಚೆಕ್ ಹಸ್ತಾಂತರಿಸುವ ಮೂಲಕ ವಿತರಿಸಲಾಯಿತು.

ನೋಣಯ್ಯ ಪೂಜಾರಿಯವರ ಪತ್ನಿ ಶ್ರೀಮತಿ ಬೇಬಿ ಶ್ರಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರಿಂದ ಚೆಕ್ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ. ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಅಧ್ಯಕ್ಷ ಸದಾಶಿವ ಊರ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕರಾದ ಗುರುರಾಜ್ ಗುರಿಪಳ್ಳ, ಜಯ ಕುಮಾರ್ ನಡ, ಚಂದ್ರಶೇಖರ್ ಇಂದಬೆಟ್ಟು, ಗ್ರಾಮ ಸಮಿತಿ ಅಧ್ಯಕ್ಷ ಪ್ರಸಾದ್ ಕುಮಾರ್, ಯುವವಾಹಿನಿ ಸಂಚಾಲನ ಸಮಿತಿ ಗುರಿಪಳ್ಳ ಅಧ್ಯಕ್ಷ ಜಯರಾಮ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಶ್ರೀಮತಿ ದೇವಕಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಧರ್ಮಸ್ಥಳದ ಯುವಕ ಸಾವು

Suddi Udaya

ಸೌಜನ್ಯರವರ ಅತ್ಯಾಚಾರ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಬೆಳಾಲು ಎಸ್.ಡಿ.ಎಮ್. ಅನುದಾನಿತ ಪ್ರೌಢಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya
error: Content is protected !!