April 2, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ.

ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ.

2019ರಲ್ಲಿ ಪ್ರವಾಹ ಬಂದ ನಂತರ, ಅಂತರ್ಜಲ ಅಭಿವೃದ್ದಿ ಮತ್ತು ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು, ಕಿಂಡಿ ಅಣೆಕಟ್ಟು ಸ್ಥಳೀಯ ತೋಟದ ಮಟ್ಟಕ್ಕೆ ಸಮವಾಗಿರುವ ಕಾರಣ ಪ್ರವಾಹದಲ್ಲಿ ಕೊಚ್ಚಿ ಬಂದ ಮರದ ದಿಮ್ಮಿಗಳು ಕಿಂಡಿ ಅಣೆಕಟ್ಟಿನಲ್ಲಿ ನಿಂತು ನೀರು ತೋಟಗಳಿಗೆ ನುಗ್ಗುತ್ತಿದೆ.

ಅಸಮರ್ಪಕವಾದ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಸ್ಥಳೀಯ ನಾಯಕರುಗಳು ತಡೆಗೋಡೆ ಕಟ್ಟಿಸಿ ಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದು ಇದುವರೆಗೂ ಆ ಕೆಲಸವಾಗಿಲ್ಲ. ಪಂಚಾಯತ್‌ನವರಿಗೆ ಕರೆ ಮಾಡಿ ತಿಳಿಸಿದರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Related posts

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಎ.13,ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 32 ಬಗೆಯ ಉಟೋಪಚಾರ

Suddi Udaya

ಹಿಂದೂ ರಾಷ್ಟ್ರದ ಉದ್ಘಾರದೊಂದಿಗೆ ಬಂಟ್ವಾಳದ ಸ್ಪರ್ಶಾ ಕಲಾಮಂದಿರದಲ್ಲಿ ಪ್ರಾರಂಭವಾದ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ- ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ವಿಕಲಚೇತನರ ವಿಶೇಷ ಗ್ರಾಮ ಸಭೆ

Suddi Udaya
error: Content is protected !!