September 6, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

ಮುಂಡಾಜೆ: ಭೀಕರ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಮುಂಡ್ರುಪ್ಪಾಡಿಯಲ್ಲಿ ಕಿಂಡಿ ಅಣೆಕಟ್ಟುವಿನಲ್ಲಿ ಮರದ ದಿಮ್ಮಿಗಳು ಶೇಖರಣೆಗೊಂಡ ಪರಿಣಾಮ ಸ್ಥಳೀಯ ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿಯಾದ ಘಟನೆ ಅ.6ರಂದು ನಡೆದಿದೆ.

ಸ್ಥಳೀಯರಾದ ಅವಿನಾಶ್ ಗೋಖಲೆ, ಶ್ರೀನಿವಾಸ್ ಗೋಖಲೆ, ಸಂಜೀವ್ ಶೆಟ್ಟಿ, ದಯಾನಂದ ಶೆಟ್ಟಿ ಮುಂತಾದವರ ತೋಟಕ್ಕೆ ನೀರು ನುಗ್ಗಿ ಹಾನಿಯಾಗಿದೆ.

2019ರಲ್ಲಿ ಪ್ರವಾಹ ಬಂದ ನಂತರ, ಅಂತರ್ಜಲ ಅಭಿವೃದ್ದಿ ಮತ್ತು ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದ್ದು, ಕಿಂಡಿ ಅಣೆಕಟ್ಟು ಸ್ಥಳೀಯ ತೋಟದ ಮಟ್ಟಕ್ಕೆ ಸಮವಾಗಿರುವ ಕಾರಣ ಪ್ರವಾಹದಲ್ಲಿ ಕೊಚ್ಚಿ ಬಂದ ಮರದ ದಿಮ್ಮಿಗಳು ಕಿಂಡಿ ಅಣೆಕಟ್ಟಿನಲ್ಲಿ ನಿಂತು ನೀರು ತೋಟಗಳಿಗೆ ನುಗ್ಗುತ್ತಿದೆ.

ಅಸಮರ್ಪಕವಾದ ಕಿಂಡಿ ಅಣೆಕಟ್ಟು ನಿರ್ಮಿಸಲಾಗಿದೆ. ಸ್ಥಳೀಯ ನಾಯಕರುಗಳು ತಡೆಗೋಡೆ ಕಟ್ಟಿಸಿ ಕೊಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದು ಇದುವರೆಗೂ ಆ ಕೆಲಸವಾಗಿಲ್ಲ. ಪಂಚಾಯತ್‌ನವರಿಗೆ ಕರೆ ಮಾಡಿ ತಿಳಿಸಿದರೂ ಸರಿಯಾದ ಸ್ಪಂದನೆ ನೀಡುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

Related posts

ಎಸ್‌ಜಿಎಫ್‌ಐ ರಾಷ್ಟ್ರೀಯ ಕಬಡ್ಡಿ ಪಂದ್ಯಾಟ: ರಾಜ್ಯ ಪ್ರತಿನಿಧಿಸಲಿರುವ ಉಜಿರೆಯ ಎಸ್.ಡಿ.ಎಂ ತಂಡ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ವತಿಯಿಂದ ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿ ಹತ್ಯೆ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya
error: Content is protected !!